ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶ ಬಂದಿದ್ದು ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಸಿಕ್ಕ ಫಲವೇ ರಾಜ್ಯದಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದ ಶಿವಮೊಗ್ಗ ಜಿಲ್ಲೆಗೆ ಶ್ರಮಿಸಿದ ಎಲ್ಲಾ ಶಿಕ್ಷಕರು ಶಿಕ್ಷಣ ಕ್ಷೇತ್ರದ ಅಧಿಕಾರಿಗಳ ಜೊತೆಗೂಡಿ ಇಡೀ ಜಿಲ್ಲೆಯ ಜವಾಬ್ದಾರಿಯನ್ನು ಹೊತ್ತು ತೃತೀಯ ಸ್ಥಾನ ಪಡೆಯಲು ಪ್ರಯತ್ನಿಸಿದ ಉಪನಿರ್ದೇಶಕರಿಗೆ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು.

ಇದೇ ರೀತಿಯಲ್ಲಿ ಮುಂದೂ ಕೂಡ ನಮ್ಮ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕಗಳನ್ನು ಪಡೆದು ಜಿಲ್ಲೆಯ ಗೌರವನ್ನು ಹೆಚ್ಚು ಮಾಡುವಂತೆ ಅಧಿಕಾರಿ ವರ್ಗ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶ್ರಮಿಸಲಿ ಎಂದು ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹಾರೈಸುತ್ತೇವೆ. ಹೆಚ್ಚು ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿನಂದನೆಗಳು.


ಈ ಸಮಯದಲ್ಲಿ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಶಾಖೆಯ ಗೌರವಾಧ್ಯಕ್ಷರಾದ ನಾಗೇಂದ್ರ ಬಾಬು ಜಿಲ್ಲಾಧ್ಯಕ್ಷರಾದ ಎಸ್ ಅನಿಲ್ ಕುಮಾರ್ ನಾಯ್ಕ್ ಕಾರ್ಯದರ್ಶಿಯಾದ ನೂತನ moolya ,ಸುರೇಶ್ ಶೆಟ್ಟಿ ,ಸುರೇಶ್ ,ಸಂತೋಷ್ ರಾಮ್ ,ಇಮ್ರಾನ್, ನಾಗರಾಜ್ ಮುಂತಾದವರು ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ