ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಟೌನ್ ಹೊಸಮನೆ ಏರಿಯಾದಲ್ಲಿ ಅಪರಿಚಿತ ವ್ಯಕ್ತಿಗಳು ಆಟೋ ಮತ್ತು ಕಾರಿನ ಗ್ಲಾಸ್ ಗಳನ್ನು ಒಡೆದು ಜಖಂಗೊಳಿಸಿರುತ್ತಾರೆಂದು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ PREVENTION OF DESTRUCTION AND LOSS OF PROPERTY ACT ಮತ್ತು ಐಪಿಸಿ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿರುತ್ತದೆ.

ಈ ಕುರಿತಂತೆ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಾರ್ವಜನಿಕರೊಂದಿಗೆ ಮಾತನಾಡಿ ಅವರು ಅಹವಾಲನ್ನು ಸ್ವೀಕರಿಸಿದರು ಹಾಗೂ ಪ್ರಕರಣದ ಆರೋಪಿಗಳನ್ನು ಕೂಡಲೇ ಪತ್ತೆ ಮಾಡಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಮತ್ತು ಶಿವಮೊಗ್ಗ ನಗರದಾದ್ಯಂತ ಈಗಾಗಲೇ ರಾತ್ರಿ ಗಸ್ತು, ಫುಟ್ ಪೆಟ್ರೋಲಿಂಗ್, ಏರಿಯಾ ಡಾಮಿನೇಷನ್ ಗಳನ್ನು ನಡೆಸಲಾಗುತ್ತಿದ್ದು, ಹೊಸಮನೆ ಏರಿಯಾಕ್ಕೆ ವಿಶೇಷ ಒತ್ತು ನೀಡಿ ಪೊಲೀಸ್ ಗಸ್ತುನ್ನು ಹೆಚ್ಚಿಸಲಾಗುವುದು ಹಾಗೂ ಯಾರೇ ಆಗಲಿ ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನ ಕಂಡುಬಂದಲ್ಲಿ, ಅಂತಹವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ.

ವರದಿ ಪ್ರಜಾ ಶಕ್ತಿ