ಶ್ರೀ ರಂಗನಾಥ ಅಂತರಗಟ್ಟಿ ಪೊಲೀಸ್ ಉಪ ನಿರೀಕ್ಷಕರು ಆಗುಂಬೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಮೇಗರವಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಾಗಾರ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕುರಿತು ಮಾತನಾಡಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳು, POCSO ಕಾಯ್ದೆ, ಸೋಶಿಯಲ್ ಮೀಡಿಯಾದ ಸುರಕ್ಷಿತ ಬಳಕೆ, ಆನ್ ಲೈನ್ ವಂಚನೆ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತಂತೆ ಮಾಹಿತಿಯನ್ನು ನೀಡಲಾಗಿರುತ್ತದೆ.ಈ ಸಂಧರ್ಬದಲ್ಲಿ ಶ್ರೀದಿವಾಕರ್ ಎಂ ಎಸ್ ಮುಖ್ಯೋಪಾಧ್ಯಾಯರು, ಶಾಲೆಯ ಶಿಕ್ಷರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ