ನೈಋತ್ಯ ಪದವೀಧರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಸರ್ಕಾರೀ ಪದವಿ ಪೂರ್ವ ಕಾಲೇಜು ಕುಂದಾಪುರ, ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ, ನ್ಯಾಯಾಲಯ ಸಂಕೀರ್ಣ ಕುಂದಾಪುರ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ NDA ಅಭ್ಯರ್ಥಿಯಾಗಿರುವ ಭೋಜೇಗೌಡ ಅವರ ಪರವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭೇಟಿ ನೀಡಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕ್ಷೇತ್ರಧ್ಯಕ್ಷರಾದ ಬಿ. ಕಿಶೋರ್ ಕುಮಾರ್, ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್, ಕುಂದಾಪುರ ಮಂಡಲ ನಿಕಟಪೋರ್ವ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ, ಮಂಗಳೂರು ಸಹಪ್ರಭಾರಿ ರಾಜೇಶ್ ಕಾವೇರಿ, ಪಕ್ಷದ ಮುಖಂಡರಾದ ಸಂಪತ್ ಕುಮಾರ್ ಶೆಟ್ಟಿ, ಪುರಸಭೆಯ ಮಾಜಿ ಸದಸ್ಯರಾದ ರತ್ನಾಕರ ಶೇರಿಗಾರ್, ಇನ್ನಿತರರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ