ಶಿವಮೊಗ್ಗ ಟೌನ್ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿನೋಬನಗರದ ವಾಸದ ಮನೆಯೊಂದರಲ್ಲಿ, ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ, ಶ್ರೀ ಸುರೇಶ್ ಡಿವೈಎಸ್ ಪಿ ಶಿವಮೊಗ್ಗ ಬಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀಮತಿ ಚಂದ್ರಕಲಾ, ಪಿಐ ವಿನೋಬನಗರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವು ದಾಳಿ ನಡೆಸಿ, ಸಂತ್ರಸ್ಥ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಶೇಖರ್ ಮೂರ್ತಿ, 45 ವರ್ಷ, ಹೊಸಮನೆ, ಶಿವಮೊಗ್ಗ ಟೌನ್ ಈತನನ್ನು ದಸ್ತಗಿರಿ ಮಾಡಿ ಆರೋಪಿಯ ವಿರುದ್ಧ IMMORAL TRAFFIC PREVENTION ACT ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

ವರದಿ ಪ್ರಜಾ ಶಕ್ತಿ