ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಶ್ರೀ ಗೋಪಾಲ ಕೃಷ್ಣ ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ ಹಾಗೂ ಶ್ರೀ ಸೀತಾರಾಂ, ಪಿಐ ಸಾಗರ ಪೇಟೆ ಪೊಲೀಸ್ ಠಾಣೆ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ನಾಗರಾಜ್, ಟಿ. ಎಂ, ಪಿ.ಎಸ್.ಐ ಸಾಗರ ಪೇಟೆ ಪೊಲೀಸ್ ಠಾಣೆರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಾದ

1) ರಾಘವೇಂದ್ರ, 42 ವರ್ಷ, ಕಟ್ಟಿನಕಾರು ಗ್ರಾಮ, ಸಾಗರ, 2) ರಮೇಶ, 20 ವರ್ಷ, ಹೊಸೂರು ಮರಾಠಿ ಗ್ರಾಮ, ಸಾಗರ ಮತ್ತು 3) ಪ್ರವೀಣ, 26 ವರ್ಷ, ಕದರೂರು ಗ್ರಾಮ, ಸಾಗರ ಇವರನ್ನು ದಸ್ತಗಿರಿ ಮಾಡಿ ಸದರಿ ಆರೋಪಿಗಳಿಂದ ಅಂದಾಜು ಮೌಲ್ಯ 23,000/- ರೂಗಳ 790 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡು, ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0144/2024 ಕಲಂ 20(a), 20(c)(ii)(a) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ವರದಿ ಪ್ರಜಾ ಶಕ್ತಿ