ಬಳ್ಳಾರಿ ಮೂಲದ ಕೌಡಿಕ ಕುಟುಂಬದ ಹಲವಾರು ದಶಕಗಳ ಕೆಳಗೆ ಶಿವಮೊಗ್ಗದಲ್ಲಿ ನೆಲೆಸಿದ್ದರು .ಈ ಕುಟುಂಬದ ಶ್ರೀ ಶರಣಪ್ಪ ಮತ್ತು ಶ್ರೀಮತಿ ಬಸವಮ್ಮನವರು 4ನೇ ಪುತ್ರರಾಗಿ ಶ್ರೀ ಕೆ .ಎಸ್ ಈಶ್ವರಪ್ಪನವರು 1948 ರಲ್ಲಿ ಶಿವಮೊಗ್ಗದಲ್ಲಿ ಜನಿಸಿದರು .ಶಾಲಾ ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್ )ಶಾಖೆಗಳ ಮೂಲಕ ವ್ಯಕ್ತಿತ್ವ ರೂಪಿಸಿಕೊಂಡರು .ನಗರದ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆಯಲ್ಲಿ ಮೆಟ್ರಿಕ್ ವಿದ್ಯಾಭ್ಯಾಸ ಮುಗಿಸಿ ನಂತರ ನ್ಯಾಷನಲ್ ಕಾಮರ್ಸ್ ಕಾಲೇಜಿನ ವಿದ್ಯಾರ್ಥಿಯಾದರೂ ,ಎರಡನೇ ವರ್ಷದ ಬಿ.ಕಾಂ.ಓದುವಾಗಲೇ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕನಾಗಿ ತಮ್ಮ ನಾಯಕತ್ವದ ಗುಣ ತೋರಿದ್ದರು.ಉಪಾಧ್ಯಕ್ಷರಾಗಿ ,ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳ ನಂಬಿಕೆಗೆ ಪಾತ್ರರಾದರು.ಈ ಸಂದರ್ಭದಲ್ಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಲ್ಲಿ ಸಕ್ರಿಯರಾದರು.ಸದಾ ಮುನ್ನುಗ್ಗುವ ಸ್ವಭಾವದಿಂದಾಗಿ ಶೀಘ್ರವಾಗಿ ಎಬಿವಿಪಿಯ ರಾಜ್ಯ ಉಪಾಧ್ಯಕ್ಷರಾಗಿ ಯಶಸ್ವಿಯಾಗಿ ಜವಾಬ್ದಾರಿ ಹೊತ್ತರು.ಸಂಘದ ಶಾಖೆಗಳಲ್ಲಿ ಮೈಗೂಡಿಸಿಕೊಂಡಿದ್ದ ರಾಷ್ಟ್ರಪ್ರೇಮ ,ಸಾಮಾಜಿಕ ಕಳಕಳಿಯ ಗುಣಗಳಿಂದಾಗಿ 1975 ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಐವರು ಸಹಜವಾಗಿಯೇ ಹೋರಾಟಕ್ಕೆ ಧುಮುಕಿದರು.ಪ್ರಜಾಪ್ರಭುತ್ವದ ರಕ್ಷಣೆಗಾಗಿ ಚಳುವಳಿ ನಡೆಸಿ , ಹಲವಾರು ತಿಂಗಳ ಸೆರೆಮನೆ ವಾಸ ಅನುಭವಿಸಿದ್ದರು . ವಿದ್ಯಾಭ್ಯಾಸದ ನಂತರ ತಮ್ಮದೇ ಸ್ವಂತ ವ್ಯವಹಾರ ಆರಂಭಿಸಿದ ಶ್ರೀ ಕೆ ಎಸ್ ಈಶ್ವರಪ್ಪನವರು ,ಸ್ವಾಮಿ ವಿವೇಕಾನಂದರಿಂದ ತೀವ್ರವಾಗಿ ಆಕರ್ಷಿತರಾಗಿದ್ದರೆ ಹಿಂದೆ ಅವರ ಉದ್ದಿಮೆಗಳೆಲ್ಲವೂ ‘ವಿವೇಕ್ ‘ ಎಂಬ ಏಜೆನ್ಸಿ ಹಾಗೂ ವಿವೇಕ್ ಅಗರಬತ್ತಿ ಮೊದಲಾದ ಘಟಕಗಳು ಇವರಲ್ಲಿದ್ದ ಉದ್ದಿಮೆ ದಾರಾನನ್ನು ಹೊರತಂದೆವು.
ಈ ಹಂತದಲ್ಲಿ ಶ್ರೀಮತಿ ಜಯಲಕ್ಷ್ಮೀ ಅವರನ್ನು ವರಿಸಿದ ಶ್ರೀಯುತರದು ,ತೃಪ್ತಿದಾಯಕ ,ಸಂತಸದ ವೈವಾಹಿಕ ಜೀವನ .
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ ಜನಸಂಘ ನಂತರ ಭಾರತೀಯ ಜನತಾ ಪಾರ್ಟಿಯ ತಳಹಂತದ ಕಾರ್ಯಕರ್ತರಾಗಿ ರಾಜಕೀಯ ಚಟುವಟಿಕೆಗಳನ್ನು ಆರಂಭಿಸಿದ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗ ನಗರ ಘಟಕದ ಕಾರ್ಯದರ್ಶಿಯಾಗಿ ನಂತರ ಶಿವಮೊಗ್ಗ ನಗರ ಸಮಿತಿಯ ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದರು .ಎಲ್ಲರೊಡನೆ ಬೆರೆಯುವ ಸ್ನೇಹ ಪ್ರವೃತ್ತಿ ,ಹಾಸ್ಯಭರಿತ ಮಾತುಗಳು ಹಾಗೂ ಸರಳ ವ್ಯಕ್ತಿತ್ವ ಇವರಿಗೆ ಬೇಗನೆ ಹೆಸರು ತಂದಿತು .
ಎಲ್ಲ ವರ್ಗದ ಜನರೊಂದಿಗೆ ಎಲ್ಲ ಹಂತಗಳ ಕಾರ್ಯ ಕರ್ತರೊಂದಿಗೆ ಆತ್ಮೀಯತೆ ಬೆಳೆಸಿ ಕೊಂಡಿದ್ದರಿಂದಲೇ 1989 ರಲ್ಲಿ ಪಕ್ಷವು ಇವರಿಗೆ ಶಿವಮೊಗ್ಗ ವಿಧಾನಸಭೆಗೆ ಸ್ಪರ್ಧಿಸಲು ಅವಕಾಶ ನೀಡಿತ್ತು .
ಶ್ರೀ ಕೆ ಎಸ್ ಈಶ್ವರಪ್ಪ ಎದುರಿಸಿದ ಮೊದಲ ಚುನಾವಣೆಯಲ್ಲಿ ವಿಜಯಮಾಲೆ ಧರಿಸಿದರು .ಅಂದು ಸಚಿವರಾಗಿದ್ದ ಶ್ರೀ.ಕೆ.ಎಚ್ ಶ್ರೀನಿವಾಸರಂತಹ ದೊಡ್ಡ ನಾಯ ಕರನ್ನು ಸೋಲಿಸುವ ಮೂಲಕ ರಾಜ್ಯದ ಗಮನ ಸೆಳೆದರು .ಮೊದಲ ಅವಧಿಯಲ್ಲಿ ಶಿವಮೊಗ್ಗದ ಕುಡಿಯುವ ನೀರಿನ ಯೋಜನೆ ,ಸರ್ಕಾರಿ ಬಸ್ ಸ್ಟ್ಯಾಂಡ್ ,ವಸತಿಯುಕ್ತ ಮಹಿಳಾ ಪಾಲಿಟೆಕ್ನಿಕ್ ,ದೂರದರ್ಶನ ಕೇಂದ್ರ ಮೊದಲಾದವು ಇವರ ಪ್ರಯತ್ನದಿಂದಲೇ ಸಂಕರಗೊಂಡವು.
ಇದರ ಜೊತೆಗೆ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ಹೊತ್ತರೂ.ಜಿಲ್ಲಾ ಘಟಕದ ನಂತರ 1991ರಲ್ಲಿ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದರು ಎಲ್ಲೆಡೆ ಯುವ ವೃಂದವನ್ನು ಸಂಘಟಿಸುವಲ್ಲಿ ಯಶಸ್ವಿಯಾದರು .ರಾಜ್ಯಾದ್ಯಂತ ಪ್ರವಾಸ ಕೈಗೊಂಡರು ,ಬಿರುಸಿನಿಂದ ಪಕ್ಷದ ಸಂಘಟನೆಗೆ ಮುಂದಾದರು .ಅವರು ತೋರಿದ ಕುಶಲತೆ ,ಜಾಣ್ಮೆ , ಹಾಗೂ ಅಜ್ಜನ ವೈಶಿಷ್ಟ್ಯಗಳು ಸಹಜವಾಗಿ ಇವರಿಗೆ ಒಳ್ಳೆಯ ಹೆಸರು ತಂದಿತ್ತು .ಶ್ರೀ ಯಡಿಯೂರಪ್ಪನವರ ನಂತರ ರಾಜ್ಯ ಘಟಕದ ಅಧ್ಯಕ್ಷರಾದರು ಈ ಮೂಲಕ ರಾಜಕೀಯ ಪಕ್ಷವೊಂದರ ರಾಜ್ಯಾಧ್ಯಕ್ಷರಾದ ಮೊದಲ ಹಿಂದುಳಿದ ವರ್ಗದ (ಕುರುಬ ಜನಾಂಗದ ) ನೇತಾರ ಎಂಬ ಕೀರ್ತಿಗೆ ಇವರು ಪಾತ್ರರಾದರು .ತಮ್ಮ ಸಾಮರ್ಥ್ಯದಿಂದಲೇ 1995ರಲ್ಲಿ ಎರಡನೇ ಅವಧಿಗೂ ರಾಜ್ಯಾಧ್ಯಕ್ಷರಾಗಿ ಚುನಾಯಿತರಾದರು .ಅಂದು ವಿಧಾನಸಭೆಯಲ್ಲಿ ಕೇವಲ 4ಶಾಸಕರನ್ನು ಹೊಂದಿದ್ದ ಬಿಜೆಪಿ ಶ್ರೀ ಕೆ ಎಸ್ ಈಶ್ವರಪ್ಪ ನನ್ನ ರ ನಾಯಕತ್ವದಲ್ಲಿ 40 ಸ್ಥಾನಗಳನ್ನು ಪಡೆಯಿತು .ಶಾಸಕಾಂಗ ಪಕ್ಷದ ನಾಯಕತ್ವ ಕೆ ಎಸ್ ಈಶ್ವರಪ್ಪನವರ ಹೆಗಲೇರಿತು .ಹುಬ್ಬಳ್ಳಿಯು ಈದ್ಗಾ ಮೈದಾನದ ಹೋರಾಟ ,ಶ್ರೀನಗರಕ್ಕೆ ತಿರಂಗ ಯಾತ್ರೆ, ಬಗರ್ ಹುಕುಂ ಚಳುವಳಿ ,ಅಯೋಧ್ಯೆಯ ರಾಮಮಂದಿರದ ಹೋರಾಟಗಳಲ್ಲಿ ತಮ್ಮ ಗಡುಸಾದ ನಾಯಕತ್ವವು ಮುತ್ಸದ್ಧಿ ತನದಿಂದ ಕೆ ಎಸ್ ಈಶ್ವರಪ್ಪನವರು ಪ್ರಸಿದ್ಧಿ ಪಡೆದರು .
1989 ಹಾಗೂ 1994 ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಶಾಸಕರಾದ ಶ್ರೀ ಕೆ ಎಸ್ ಈಶ್ವರಪ್ಪನವರು 1999 ರಲ್ಲಿ ಅನಿರೀಕ್ಷಿತವಾಗಿ ಸೋಲಬೇಕಾಯಿತು.ಆದರೆ ಇವರಲ್ಲಿನ ಕಾರ್ಯದಕ್ಷತೆ ಗುರುತಿಸಿದ ಕೇಂದ್ರ ಸರ್ಕಾರವು ಇವರನ್ನು ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿತು.ಅಲ್ಲಿಯವರೆಗೆ ಕೇವಲ ಸಂಶೋಧನಾ ಲ್ಯಾಬ್ ಗಳಿಗೆ ಮಾತ್ರ ಸೀಮಿತವಾಗಿದ್ದ ಈ ರೇಷ್ಮೆ ಮನ್ನಣೆಯನ್ನು ರೈತರ ಹೊಲಗಳಿಗೆ ತಂದೆ ಕೆ ಎಸ್ ಈಶ್ವರಪ್ಪ ತಾವು ರೈತರ ಜನಸಾಮಾನ್ಯರ ನೀಗಿದ್ದ ಎಂಬುದನ್ನು ಸಾಬೀತು ಪಡಿಸಿದರು .
2001ರ ಕನಕಪುರ ಉಪ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಎದುರಿಸುವ ಮೂಲಕ ಸಂಸತ್ತಿಗೆ ಸ್ಪಂದಿಸಿದ ಈಶ್ವರಪ್ಪ ರಾಷ್ಟ್ರದ ಗಮನ ಸೆಳೆದಿರುವ .ಚುನಾವಣೆಯ ನಂತರ ಮತ್ತೆ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ನಿಯೋಜನೆಗೊಂಡರು .2ಬಾರಿ ಈ ಅವಕಾಶ ಪಡೆದ ಮೊದಲಿಗರಾದರು.
2004 ರ ವಿಧಾನಸಭಾ ಚುನಾವಣೆಯಲ್ಲಿ ಮೂರನೇ ಅವಧಿಗೆ ಶಿವಮೊಗ್ಗದಿಂದ ಶಾಸಕರಾದರು.ವಿಧಾನಸಭೆಯಲ್ಲಿ ಬಿಜೆಪಿಯ ಹಿರಿಯ ಸದಸ್ಯರಾಗಿದ್ದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು .
2007 ರಲ್ಲಿ ಬಿಜೆಪಿಯ ಮೊದಲ ಸಮ್ಮಿಶ್ರ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿ ಅದ್ಭುತವಾಗಿ ಸಾಧನೆ ಮಾಡಿದರು .ಕಳಸಾ ಬಂಡೂರಿ ಯೋಜನೆಯನ್ನು ಆರಂಭಿಸುವಲ್ಲಿ ಇವರು ತೋರಿದ ಜನ ಮೆಚ್ಚುಗೆ ಗಳಿಸಿತು .ಹತ್ತಾರು ವರ್ಷಗಳಿಂದ ಕುಂಟುತ್ತಾ ಸಾಗಿದ್ದ 39 ಯೋಜನೆಗಳನ್ನು ಮುಗಿಸಿದ್ದು ಗಮನಾರ್ಹ ಸಾಧನೆ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನ , ಕೆರೆಗಳ ಪುನರುಜ್ಜೀವನದಂತಹ ಜನಪರ ಕಾರ್ಯಗಳಿಂದ ‘ಜಿ ‘ಟೆಲಿವಿಜನ್ ನಡೆಸಿದ ಸದ್ದಿನಲ್ಲಿ 7ಲಕ್ಷಕ್ಕೂ ಅಧಿಕ ಎಸ್ ಎಂಎಸ್ ಗಳಿಸಿ ರಾಜ್ಯದ ಅತ್ಯುತ್ತಮ ಸಚಿವ ಎಂಬ ಜನಮನ್ನಣೆ ಗಳಿಸಿದರು .
2008 ರಲ್ಲಿ ನಡೆದ ಚುನಾವಣೆಯಲ್ಲಿ 4 ನೇ ಬಾರಿಗೆ ಗೆದ್ದದ್ದು ಅಲ್ಲದೆ ,ಶ್ರೀ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಇಂಧನ ಸಚಿವರಾಗಿ ಕಾರ್ಯನಿರ್ವಹಿಸಿ ,ನಂತರ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ . ತದನಂತರ ಜಗದೀಶ್ ಶೆಟ್ಟರ್ ಸಂಪುಟದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ .
2014ರಲ್ಲಿ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಲೆ ಮತ್ತು ಕ್ರೀಡೆಗಳಲ್ಲಿ ಆಸಕ್ತಿ ಹೊಂದಿರುವ ಕೆ ಎಸ್ ಈಶ್ವರಪ್ಪನವರು ಕಾಲೇಜಿನ ದಿನಗಳಲ್ಲಿ ಉತ್ತಮ ಖೊ -ಖೊ ಹಾಗೂ ಫುಟ್ ಬಾಲ್ ಪಟುವಾಗಿದ್ದರು .ಸಂಘದ ಘೋಷ್ ನಲ್ಲಿ ಆನಕ (side Drum) ವಾದಕರಾಗಿ ತಮ್ಮ ಕೈಚಳಕ ತೋರಿದ್ದು .ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಭಿರುಚಿ ಹೊಂದಿರುವ ಶ್ರೀಮಂತರು 1975ರಲ್ಲಿ Mallard associates ಎಂಬ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾಗಿದ್ದರು.ಪ್ರಸ್ತಕ ಶಿವಮೊಗ್ಗದ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ಶುರುವಾಗಿದ್ದು ,ಉತ್ತಮ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಸುದ್ದಿಗೆ ಚಂದ್ರಗುಪ್ತ ಟ್ರಸ್ಟ್ ,ಕನಕ ವಿದ್ಯಾಸಂಸ್ಥೆ ,ಕುರುಬರ ಸಹಕಾರ ಸಂಘ ,ಶನಿದೇವರ ದೇವಸ್ಥಾನದ ಸಮಿತಿಗಳಲ್ಲಿ ಮಾರ್ಗದರ್ಶನ ಮಾಡುತ್ತಿದ್ದಾರೆ .
2018ರಲ್ಲಿ ನಡೆದ 15 ನೇ ಕರ್ನಾಟಕ ವಿಧಾನಸಭೆಯ ಚುನಾವಣೆಯಲ್ಲಿ ಶಾಸಕನಾಗಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಭೂತಪೂರ್ವ ಬಹುಮತದಿಂದ ಆಯ್ಕೆಯಾದ ಶ್ರೀ ಕೆ ಎಸ್ ಈಶ್ವರಪ್ಪನವರು ಪ್ರಸ್ತುತ ಶ್ರೀ ಯಡಿಯೂರಪ್ಪನವರ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ .
ಇದೆಲ್ಲಕ್ಕಿಂತ ವಿಶೇಷವಾಗಿ ,ಅವರೊಬ್ಬ ಕೌಟಂಬಿಕ ವ್ಯಕ್ತಿ ,ಬಿಡುವಿನ ವೇಳೆಯಲ್ಲಿ ಮಡದಿ ಮಕ್ಕಳೊಡನೆ ಕಾಲ ಕಳೆಯುವುದನ್ನು ಬಯಸುತ್ತಾರೆ.ಇಂದಿಗೂ ಪ್ರತಿ ಭಾನುವಾರ ಕುಟುಂಬದ ಸದಸ್ಯರೊಡನೆ ಮನೆಯಲ್ಲಿ ತಪ್ಪದೆ ಭಜನೆ ನಡೆಸುವ ಕೆ ಎಸ್ ಈಶ್ವರಪ್ಪನವರ ದೈವಭಕ್ತಿ ಅಪಾರ .ಸದಾ ತೀರ್ಥ ಕ್ಷೇತ್ರಗಳಿಗೆ ,ದೇವಾಲಯಗಳಿಗೆ ಭೇಟಿ ನೀಡುತ್ತಾರೆ .ಜನತೆ ಹಾಗೂ ಜನಾರ್ದನರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅಪರೂಪದ ಸರಳ ರಾಜಕಾರಣಿ ಕೆ ಎಸ್ ಈಶ್ವರಪ್ಪ .

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ