ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕಗಳ ಒಕ್ಕೂಟದ ವತಿಯಿಂದ ಇಂದು ನಗರದ ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ನಗರದ ಸಮಸ್ಯೆಗಳ ಚಿಂತನ ಮಂಥನ ಸಭೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ರಸ್ತೆ ಚರಂಡಿ, ಬೀದಿ ದೀಪ, 24*7 ಕುಡಿಯುವ ನೀರು, ಯುಜಿಡಿ, ರಾಜಾ ಕಾಲವೆ, ನಗರದ ಸ್ವಚ್ಛತೆ, ಹಸರೀರಣ ಹಾಗೂ ಇತರೆ ನಾಗರೀಕ ಸಮಸ್ಯೆಗಳ ಬಗ್ಗೆ ಆಲಿಸಿ, ಚರ್ಚೆ ಮಾಡಿ ಪರಿಹಾರ ಮಾಡಿಕೊಡುವ ಭರವಸೆ ನೀಡಿದರು. ಚರ್ಚೆಯಲ್ಲಿ ಸುಮಾರು 200 ಕ್ಕೂ ಹೆಚ್ಚು ನಿವಾಸಿಗಳು ಪಾಲ್ಗೊಂಡಿದ್ದರು.

ಈ ಚಿಂತನ ಮಂಥನ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಗೋಪಾಲ್, ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್, ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಶೋಕ್ ಕುಮಾರ್, ವೇದಿಕೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ