ಗೋಪಾಲಗೌಡ ಬಡಾವಣೆಯ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗದ ಮಹಾನಗರ ಪಾಲಿಕೆ ಆಸ್ತಿ ಕಬಳಿಕೆ ಬಗ್ಗೆ ನಿನ್ನೆ ದಿನ ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಲಾಗಿತ್ತು.

ದೂರಿನ ಮೇರೆಗೆ ತುರ್ತಾಗಿ ಸ್ಪಂದಿಸಿದ ಜಿಲ್ಲಾಡಳಿತ ಇಂದು ಜೆಸಿಬಿ ಮೂಲಕ ಆಕ್ರಮಿಸಿಕೊಂಡ ಜಾಗವನ್ನು ತೆರವುಗೊಳಿಸಿದರು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗೆ ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮದ ಸಂಘದ ಪರವಾಗಿ ಜಿಡಿ ಮಂಜುನಾಥ್ ಮತ್ತು ನಿವಾಸಿಗಳು ಧನ್ಯವಾದಗಳು ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ