ಶಿವಮೊಗ್ಗ ನಗರದ ತೀರ್ಥಹಳ್ಳಿ ರಸ್ತೆಯಲ್ಲಿರುವ ವೈದ್ಯಕೀಯ ಸಂಸ್ಥೆಯಾದ “ನಾರಾಯಣ ಹೃದಯಾಲಯ” ದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನೂತನವಾಗಿ ತೆರೆದಿರುವ “ಕ್ಯಾನ್ಸರ್ ಕೇರ್ ಬ್ಲಾಕ್” ಕಟ್ಟಡವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ದೇಶದ ಪ್ರಖ್ಯಾತ ಹೃದಯ ತಜ್ಞರಾದ ಡಾ|| ಶ್ರೀ ದೇವಿ ಪ್ರಸಾದ್ ಶೆಟ್ಟಿ , ಸಂಸದರಾದ ಬಿ ವೈ  ರಾಘವೇಂದ್ರ ,ನಾರಾಯಣ ಗ್ರೂಪ್ ಎಂಡಿ ಆದ ಶ್ರೀ ಇಮಾನಿಯಲ್ ರೂಪಟ್ ಆಸ್ಪತ್ರೆಯ ವ್ಯವಸ್ಥಾಪಕರಾದ ಶ್ರೀಕಾಂತ್ ಹೆಗ್ಡೆ ಸೇರಿದಂತೆ ಅನೇಕ ಗಣ್ಯಮಾನ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ