ಶ್ರೀ ಬಿ ಆರ್ ಮಹದೇವ, ಎ ಆರ್ ಎಸ್ ಐ, ಡಿಎಆರ್, ಶಿವಮೊಗ್ಗ, ಶ್ರೀ ಟಿ ಎಸ್ ವೀರೇಶಪ್ಪ, ಎಎಸ್ಐ, ವಿನೋಬನಗರ ಪೊಲೀಸ್ ಠಾಣೆ, ಶ್ರೀ ಇಸೂಫ್, ಎಎಸ್ಐ, ತೀರ್ಥಹಳ್ಳಿ ಪೊಲೀಸ್ ಠಾಣೆ, ಶ್ರೀ ಜಗದೀಶ್ ಹೆಚ್. ಬಿ, ಎಪಿಸಿ ಡಿಎಆರ್ ಶಿವಮೊಗ್ಗ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿಯನ್ನು ಹೊಂದಿದ್ದು ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಸತೀಶ್, ಸಹಾಯಕ ಆಡಳಿತಾಧಿಕಾರಿಗಳು, ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ ಶ್ರೀ ಮಾಳಗಿ, ಶಾಖಾಧೀಕ್ಷಕರು ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ ರವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ