ಮಹಾನಗರ ಪಾಲಿಕೆಯಲ್ಲಿ ಶಾಸಕ ಚನ್ನಬಸಪ್ಪ ನೇತ್ರದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಗೆ ಚೆನ್ನಬಸಪ್ಪ ಜನರ ಸಮಸ್ಯೆಗೆ ಸ್ಪಂದಿಸಿ ಎಂದು ಹೇಳಿದರು.

  1. ಶಿವಮೊಗ್ಗ ನಗರದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಜ್ವರದ ಕುರಿತಂತೆ ಕ್ರಮವಹಿಸುವಂತೆ ಸೂಚಿಸಿ, ದಿನನಿತ್ಯ ಫಾಗಿಂಗ್ ವ್ಯವಸ್ಥೆ, ಸ್ಪ್ರೇ ಸಿಂಪಡಣೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗೆ ಸೂಚಿಸಿದರು.
  2. ಶಿವಮೊಗ್ಗ ನಗರದ ಗೋಪಾಲ, ಬೊಮ್ಮನಕಟ್ಟೆ, ಗಾಡಿಕೊಪ್ಪ ಹಾಗೂ ಸೋಮಿನಿಕೊಪ್ಪದ ಹೊರವಲಯ ಪ್ರದೇಶಗಳಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರುದ್ರಭೂಮಿಗೆ ಪ್ರತ್ಯೇಕ ಜಾಗ ಹಾಗೂ ಮೂಲಸೌಕರ್ಯಕ್ಕಾಗಿ ಕ್ರಮ ವಹಿಸುವಂತೆ ಸೂಚಿಸಿದರು.
  3. ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯ ರುದ್ರ ಭೂಮಿಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದರು.
  4. ಶಿವಮೊಗ್ಗ ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಇರುವ ಅಂಡರ್ ಪಾಸ್ ಅನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆಯಲು ಸೂಚಿಸಿದರು.
  5. ಶಿವಮೊಗ್ಗ ನಗರದಲ್ಲಿ ಬೀದಿ ನಾಯಿಗಳಿಂದ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
  6. ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಪ್ರತಿ ಮಂಗಳವಾರ ನಡೆಯುವ ಸಂತೆಯನ್ನು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಬಳಿ ಇರುವ ಸಂತೆ ಮೈದಾನಕ್ಕೆ ಸ್ಥಳಾಂತರಿಸಲು ಆದೇಶಿಸಿದರು.
  7. ಶಿವಮೊಗ್ಗ ನಗರದ ಹೂವಿನ ಮಾರುಕಟ್ಟೆಯನ್ನು ಬಸ್ ಸ್ಟ್ಯಾಂಡ್ ನಿಂದ ಬಿ.ಹೆಚ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಕ್ಕೆ ಸ್ಥಳಾಂತರಿಸಲು ಆದೇಶಿಸಿದರು.
  8. ಪೌರಕಾರ್ಮಿಕರ ಭವನ ಮತ್ತು ಪೌರಕಾರ್ಮಿಕರಿಗೆ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಉದ್ಘಾಟಿಸಲು ಸೂಚಿಸಿದರು.
  9. ಶಿವಮೊಗ್ಗ ನಗರದಲ್ಲಿರುವ ಬೀದಿ ದೀಪಗಳ ಸಮಸ್ಯೆಗಳ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.
  10. ನಗರದ ಹೊರವಲಯದಲ್ಲಿರುವ ತಂಬಾಕು ಗೋಡನನ್ನು ಗೋಶಾಲೆಗೆ ನೀಡುವಂತೆ ಸರ್ಕಾರಗೆ ಪ್ರಸ್ತಾವನೆ ಕಳಿಸಲು ಆದೇಶಿಸಿದರು.
  11. ಎಂಆರ್‌ಎಸ್ ಸರ್ಕಲ್ ನಲ್ಲಿ ಯುದ್ಧ ಟ್ಯಾಂಕರ್ ಸ್ಥಾಪಿಸುವ ಕುರಿತಂತೆ ಚರ್ಚೆ ನಡೆಸಿದರು.

ವರದಿ ಪ್ರಜಾ ಶಕ್ತಿ