ಇತ್ತೀಚಿಗೆ ಹಾವೇರಿಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಜನ ಮೃತರಾಗಿದ್ದು, ನಾಲ್ಕು ಜನ ತೀವ್ರ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇನ್ನಿಬ್ಬರು ತೀವ್ರ ನಿಗಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಕುಟುಂಬಕ್ಕೆ ಸಂತಾಪ ಸೂಚಿಸಲು ಮಾನ್ಯ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ದಿನಾಂಕ-29-6-24 ಮೃತರ ಗ್ರಾಮಕ್ಕೆ ಭೇಟಿ ನೀಡಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಶ್ರೀಮತಿ ಗೀತಾ ಶಿವರಾಜಕುಮಾರ್ ರವರು ಮೃತರಾದ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿಗಳನ್ನು ನೀಡಲಿದ್ದಾರೆ ಎಂದು ಭರವಸೆ ನೀಡಿದ್ದರು.


ಅದರಂತೆ ನಾಳೆ 8ರಂದು ಬೆಳಗ್ಗೆ 11:30ಕ್ಕೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಎಮ್ಮೆ ಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮಾನ್ಯ ಸಚಿವರು ನೀಡಿದ ಭರವಸೆಯಂತೆ ಮೃತ ಕುಟುಂಬದ ಸದಸ್ಯರಿಗೆ ವೈಯಕ್ತಿಕ ಪರಿಹಾರ ಧನ ಹಸ್ತಾಂತರಿಸಲಿದ್ದು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿರುತ್ತಾರೆ.

ಜಿ.ಡಿ. ಮಂಜುನಾಥ್
ರಾಜ್ಯ ಸಂಯೋಜಕರು
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗ ಶಿವಮೊಗ್ಗ