ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಓಎಸ್ಎಂ ರಸ್ತೆಯ ಶ್ರೀ ಮಂಜುನಾಥ ಆಟೋ ಸ್ಪೇರ್ಸ್ ಅಂಗಡಿಯ ರೋಲಿಂಗ್ ಶೆಟರ್ ನ ಲಾಕ್ ನ್ನು ಆಯುಧದಿಂದ ಮೀಟಿ ತೆಗೆದು ಒಳಗೆ ಡ್ರಾನಲ್ಲಿ ಇಟ್ಟಿದ್ದ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಹಳೇನಗರ ಪೊಲೀಸ್ ಠಾಣಾ ಗುನ್ನೆ ಸಂಖ್ಯೆ: 0109/2024 ಕಲಂ 457, 380 ಐಪಿಸಿ* ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಪ್ರಕರಣದಲ್ಲಿ ಆರೋಪಿತರ ಪತ್ತೆಗಾಗಿ ಶ್ರೀ ಮಿಥುನ್ ಕುಮಾರ್ ಜಿ.ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಮತ್ತು ಶ್ರೀ ಕಾರಿಯಪ್ಪ ಎ.ಜಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಗಜಾನನ ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ ಪ್ರಭಾರ ಮತ್ತು ಶ್ರೀ ಶೈಲಕುಮಾರ್, ವೃತ್ತ ನಿರೀಕ್ಷಕರು ನಗರ ವೃತ್ತ ಭದ್ರಾವತಿ ರವರ ಮೇಲ್ವಿಚಾರಣೆಯಲ್ಲಿ ಶ್ರೀ ಶರಣಪ್ಪ ಹೆಚ್, ಪಿಎಸ್ಐ ಹಳೆನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳಾದ ಹೆಚ್ ಸಿ ಹಾಲಪ್ಪ, ಪಿಸಿ ನಾರಾಯಣ ಸ್ವಾಮಿ, ಮೌನೇಶ್ ಶೀಕಲ್, ಚಿಕ್ಕಪ್ಪ ಎಸ್ ಮತ್ತು ಪ್ರವೀಣ್ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ಪ್ರಕರಣದ ಆರೋಪಿಗಳಾದ 1) ಸೈಯದ್ ಹಸೇನ್ @ ಜಂಗ್ಲಿ, 19 ವರ್ಷ, ಯಕಿನ್ಸಾ ಕಾಲೋನಿ ಭದ್ರಾವತಿ ಮತ್ತು 2) ಸೈಯದ್ ಇರ್ಫಾನ್ @ ಕಾಲು, 21 ವರ್ಷ, ಯಕಿನ್ಸಾ ಕಾಲೋನಿ ಭದ್ರಾವತಿ ಇವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಪ್ರಕರಣದಲ್ಲಿ ಕಳ್ಳತನ ಮಾಡಿಕೊಂಡು ಹೋದ ನಗದು ಹಣ ರೂ 40,000/- ಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

ವರದಿ ಪ್ರಜಾ ಶಕ್ತಿ