ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಬಿಜೆಪಿ ಶಿವಮೊಗ್ಗ ಜಿಲ್ಲೆ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕಾರಿಣಿ ಸಭೆಗೆ ಸಂಸದ ಬಿ ವೈ ರಾಘವೇಂದ್ರ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯ ಸಾಧಕ ಬಾಧಕಗಳ ಕುರಿತು ಸುದೀರ್ಘ ಪರಾಮರ್ಶೆ ನಡೆಸಲಾಯಿತು. ಇದರೊಂದಿಗೆ ಮುಂಬರುವ ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ ಹಾಗೂ ಸಹಕಾರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಸಂಘಟನಾತ್ಮಕ ದೃಷ್ಟಿಯಿಂದ ಹಲವಾರು ಪ್ರಮುಖ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಅವರು, ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ಅವರು, ಶ್ರೀ ಅರುಣ್ ಅವರು, ಶ್ರೀ ಧನಂಜಯ ಸರ್ಜಿ ಅವರು, ಮಾಜಿ ಶಾಸಕರಾದ ಶ್ರೀ ಹರತಾಳು ಹಾಲಪ್ಪ ಅವರು, ಶ್ರೀ ಕುಮಾರ್ ಬಂಗಾರಪ್ಪ ಅವರು, ಮುಖಂಡರಾದ ಶ್ರೀ ಸಿದ್ದರಾಮಣ್ಣ ಅವರು, ಶ್ರೀ ಗಿರೀಶ್ ಪಟೇಲ್ ಅವರು, ಶ್ರೀ ಸ್ವಾಮಿರಾವ್ ಅವರು, ಶ್ರೀ ದತ್ತಾತ್ರಿ ಅವರು ಸೇರಿದಂತೆ ಇನ್ನೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ