ಶಿವಮೊಗ್ಗ ಜಿಲ್ಲಾ ಜೆಡಿಎಸ್ ಹಾಗೂ ನಗರ ಜೆಡಿಎಸ್ ವತಿಯಿಂದ ನಗರದ ಮಾಜಿ ಶಾಸಕರು ರಾಜ್ಯ ಜೆಡಿಎಸ್ ಉಪಾಧ್ಯಕ್ಷರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಅವ್ಯಾಹತವಾಗಿ ಹರಡುತ್ತಿರುವ ಡೆಂಗ್ಯೂ, ಚಿಕನ್ ಗುನ್ಯ, ಜೀಕಾ ವೈರಸ್ ಜ್ವರದ ಬಗ್ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ತೆಗೆದುಕೊಂಡಿರುವ ಚಿಕಿತ್ಸಾ ಕ್ರಮಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರವಾಗಿ ಮಾಹಿತಿ ಪಡೆದು, ಇನ್ನು ಅವಶ್ಯಕ ಇರುವ ತುರ್ತು ಕ್ರಮಗಳ ಬಗ್ಗೆ ಗಮನ ಹರಿಸಿ ಜಾರಿಗೆ ತರಲು ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾದ ಡಾ.ತಿಮ್ಮಪ್ಪ ಅವರನ್ನು ಭೇಟಿ ಮಾಡಿ ಅಗ್ರಹಿಸಲಾಯಿತು.

ಇದೆ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಧ್ಯಕ್ಷ ರಾಮಕೃಷ್ಣ, ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ವಕ್ತಾರ ನರಸಿಂಹ ಗಂಡದಮನೆ, ಪ್ರಮುಖರಾದ ರಮೇಶ್ ನಾಯಕ್, ತ್ಯಾಗರಾಜ್, ಸಂಗಯ್ಯ, ನಾಗೇಶ್, ದಯಾನಂದ್, ಗೋಪಿ, ವಿನಯ್, ವೆಂಕಟೇಶ್ ರವಿ, ಸಿದ್ದೇಶ್, ಯಶವಂತ್, ಮಂಜು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ