ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ(ರಿ.)ದ ವಜ್ರ ಮಹೋತ್ಸವ ವರ್ಷಾಚರಣೆ ಅಂಗವಾಗಿ ಸಂಘದ ಅಧಿಕೃತ ಕಟ್ಟಡದ ಮೊದಲ ಮಹಡಿಯಲ್ಲಿ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳಿಗೆ ಕೌಶಲ್ಯ ನೀಡುವ ಮತ್ತು ಜಿಲ್ಲಾ ಕೈಗಾರಿಕೋದ್ಯಮಿಗಳಿಗೆ ಹಾಗೂ ವಾಣಿಜ್ಯೋದ್ಯಮಿಗಳಿಗೆ ಪೂರಕವಾದ ಕೌಶಲ್ಯಯುಕ್ತವಾದ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ನೂತನವಾಗಿ ತೆರೆದಿರುವ ಉನ್ನತ ಮಟ್ಟದ Advanced Skill Academy ಕಾರ್ಯಕ್ರಮವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮುಂಚಿನಿಂದಲೂ ಜನಪರ ಕೆಲಸಗಳನ್ನು ಮಾಡುತ್ತಾ ಈಗ ವಿದ್ಯಾರ್ಥಿಗಳಿಗೆ ಅನುಕೂಲಕೊಸ್ಕರ ಜೊತೆಗೆ ಮುಂದಿನ ಜೀವನ ಸುಗಮವಾಗಲಿ ಎಂದು ಇತರದ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ನಿಕಟ ಪೂರ್ವ ಶಾಸಕರಾದ ಶ್ರೀ ರುದ್ರೇಗೌಡ ಅವರು, ವಿಧಾನ ಪರಿಷತ್ ಶಾಸಕರುಗಳಾದ ಶ್ರೀ ಅರುಣ್ ಅವರು ಹಾಗೂ ಶ್ರೀ ಧನಂಜಯ ಸರ್ಜಿ ಅವರು, ಕೈಗಾರಿಕಾ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಗೋಪಿನಾಥ್ ಅವರು, ಸಂಘದ ಪದಾಧಿಕಾರಿಗಳು ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ