ರಾಜ್ಯ ಯುವ ಕಾಂಗ್ರೆಸ್ ನ ಶಿಸ್ತು ಪಾಲನಾ ಸಮಿತಿಗೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‌.ಪಿ. ಗಿರೀಶ್ ನೇಮಕವಾಗಿದ್ದಾರೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಶಿಸ್ತು ಪಾಲನಾ ಸಮಿತಿಯ ನೂತನ ಸದಸ್ಯರಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ಹೆಚ್‌ .ಪಿ .ಗಿರೀಶ್ ರವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರು ಹುಬ್ಬಳ್ಳಿಯಲ್ಲಿ ನಡೆದ ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯಕಾರಣಿ ಸಭೆ ಮತ್ತು ಯುವ ವಿಕಾಸ ಶಿಬಿರದಲ್ಲಿ ಘೋಷಿಸಿ ನೇಮಕ ಮಾಡಿ ಆದೇಶಿಸಿದ್ದಾರೆ.