ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಗಾಜನೂರಿನ ತುಂಗಾ ಡ್ಯಾಮ್ ಗೆ ಭೇಟಿ ನೀಡಿದರು.ಗಾಜನೂರಿನ ತುಂಗಾ ಡ್ಯಾಮ್ ಗೆ ಭೇಟಿ ನೀಡಿ, ಡ್ಯಾಮ್ ನ ಪ್ರಸ್ತುತ ಒಳಹರಿವು ಹಾಗೂ ಹೊರ ಹರಿವಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪಡೆದುಕೊಂಡರು.

ಪ್ರಸ್ತುತ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಕೈಗೊಳ್ಳಬೇಕಾದ ಎಚ್ಚರಿಕೆಯ ಕುರಿತು ಮಾರ್ಗದರ್ಶನ ನೀಡಿದರು. ಹಾಗೂ ಮಳೆಯ ಪ್ರಮಾಣ ಅಧಿಕವಾಗುತ್ತಿರುವ ಕಾರಣ ನದಿ ಪಾತ್ರದ ಜನತೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಮುಖಾಂತರ ಸ್ಥಳ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ