ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀರ್ ಜಾನ್ ಕಾಲೋನಿಯಲ್ಲಿ ವ್ಯಕಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಶ್ರೀ ಗಜಾನನ ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ ಪ್ರಭಾರ ಹಾಗೂ ಶ್ರೀಶೈಲ್, ಸಿಪಿಐ ಭದ್ರಾವತಿ ನಗರ ವೃತ್ತ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ಶರಣಪ್ಪ ಹೆಚ್. ಪಿ.ಎಸ್.ಐ ಹಳೆನಗರ ಪೊಲೀಸ್ ಠಾಣೆರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಕೆ ಎಂ ಅಬೀದ್, 35 ವರ್ಷ, ಅನ್ವರ್ ಕಾಲೋನಿ ಭದ್ರಾವತಿ ಈತನನ್ನು ದಸ್ತಗಿರಿ ಮಾಡಿ, ಆರೋಪಿಯಿಂದ ಅಂದಾಜು ಮೌಲ್ಯ 5,000/- ರೂಗಳ 322 ಗ್ರಾಂ ತೂಕದ ಒಣ ಗಾಂಜಾವನ್ನು, ಗಾಂಜಾ ಮಾರಾಟ ಮಾಡಿ ಗಳಿಸಿದ ರೂ 1000/- ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು, ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0119/2024 ಕಲಂ 20(b)(ii)(A) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ವರದಿ ಪ್ರಜಾ ಶಕ್ತಿ