ಉಡುಪಿ ಜಿಲ್ಲೆಯ ಭಾರತ್‌ ಸೌಟ್ಸ್‌ & ಗೈಡ್ಸ್‌ ಜಿಲ್ಲಾ ಮುಖ್ಯ ಆಯುಕ್ತರಾಗಿ ಜಯಕರ್‌ ಶೆಟ್ಟಿ ಇಂದ್ರಾಳಿ ಅವರನ್ನು ನೇಮಕ ಮಾಡಿ ರಾಜ್ಯ ಆಯುಕ್ತರದ ಪಿಜಿಆರ್ ಸಿಂಧ್ಯಾ ಆದೇಶ ಹೊರಡಿಸಿದ್ದಾರೆ. ಶ್ರೀ ಯುತರು ಪ್ರಸ್ತುತ ವಿಶ್ವ ಬಂಟರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜಯಕರ್ ಶೆಟ್ಟಿ ನೇತೃತ್ವದಲ್ಲಿ ಜಿಲ್ಲಾ ಸದಸ್ಯರ ಮತ್ತು ಮುಖಂಡರ ತಂಡವನ್ನು ಪ್ರಾರಂಭ ಮಾಡಿ ಸಂಸ್ಥೆಯಲ್ಲಿ ಒಳ್ಳೆ ಕೆಲಸಗಳನ್ನು ಮಾಡಿ ಎಂದು ಹೇಳಿದ್ದಾರೆ. ಇಷ್ಟು ವರ್ಷ ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಸಂಸ್ಥೆಯು ಒಳ್ಳೆಯ ಸಮಾಜಮುಖಿ ಕೆಲಸಗಳು ಮಾಡುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ನಿಮ್ಮ ಅವಧಿಯಲ್ಲಿ ಇನ್ನು ಹೆಚ್ಚು ಒಳ್ಳೆಯ ಕೆಲಸಗಳಾಗಲಿ ಎಂದು ಆಶಿಸಿದರು.

ವರದಿ ಪ್ರಜಾ ಶಕ್ತಿ