ಸನ್ಮಾನ್ಯ ಶ್ರೀ ಕೆ.ಎಸ್ ಈಶ್ವರಪ್ಪನವರು ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪನವರ ಜತೆಯಲ್ಲಿ ತಳ ಮಟ್ಟದಿಂದ ಸಂಘಟನೆ ಮಾಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು ವಿರೋಧ ಪಕ್ಷದ ನಾಯಕರಾಗಿ ಹಲವು ಬಾರಿ ಶಾಸಕರಾಗಿ ಹಾಗೂ ಹಲವು ಬಾರಿ ಸಚಿವರಾಗಿ ರಾಜ್ಯದ ಜನತೆಗೆ ಕೊಡುಗೆ ನೀಡಿದ್ದಾರೆ. ಮೊದಲನೇ ಅಲೆಯಲ್ಲಿ ಶಿವಮೊಗ್ಗ ಜನತೆಗೆ ಆರೋಗ್ಯ ದೃಷ್ಟಿಯಿಂದ ಕೋವಿಡ್ ಕಿಟ್ ಹಾಗೂ ಆಹಾರ ಕಿಟ್ ನೀಡಿದ್ದಾರೆ. ಎರಡನೇ ಅಲೆಯಲ್ಲಿ ಶುಭಮಂಗಳ ಕಲ್ಯಾಣ ಮಂಟಪವನ್ನು ಕೋವಿಡ್ ಸೆಂಟರ್‌ ಮಾಡಿ ಶಿವಮೊಗ್ಗ ಜನತೆಗೆ ಸೇವೆಯನ್ನು ಸಲ್ಲಿಸಿದ್ದಾರೆ .ಆದಕಾರಣ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆ.ಎಸ್ ಈಶ್ವರಪ್ಪ ಅಭಿಮಾನಿ ಬಳಗದ ವತಿಯಿಂದ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರಕ್ಕೆ ಪತ್ರಿಕೆ ಹಾಗೂ ಮಾಧ್ಯಮದವರ ಮುಖಾಂತರ ಕಳ ಕಳಿಯಿಂದ ಕೇಳುದ್ದೇವೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153