ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ.)ದ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ವಿದ್ಯಾನಿಧಿ ಅಡಿಯಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಸುವರ್ಣ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿರುವ ಹಿರಿಯ ದಂಪತಿಗಳಿಗೆ ಸನ್ಮಾನ ಹಾಗೂ ಸಂಘದ ಹಿರಿಯ ನಿರ್ದೇಶಕರಿಗೆ ಅಭಿನಂದಿಸಿದರು.ಸನ್ಮಾನಿತರಿಗೆ ಅಭಿನಂದಿಸಿ ಸಂಘದ ವತಿಯಿಂದ ಗೌರವ ಸ್ವೀಕರಿಸಲಾಯಿತು.

ಈ ಸಮಯದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಅವರು, ಪ್ರಮುಖರಾದ ಶ್ರೀ ಹರಿಕೃಷ್ಣ ಅವರು, ಶ್ರೀ ನಾಗೇಶ್ ಅವರು, ಶ್ರೀ ಶೇಷಗಿರಿ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ