ಶಿವಮೊಗ್ಗ ಮತ್ತು ದಾವಣಗೆರೆ ಹಾಗೂ ಚಿತ್ರದುರ್ಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ 2024-2029ನೇ ಸಾಲಿನ ಚುನಾವಣೆ ಅಂಗವಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿ ಶಿವಮೊಗ್ಗ ವಿಭಾಗದಿಂದ ಶಿವಮೊಗ್ಗ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀ ಜಗದೀಶ್ ಹಾಗೂ ಭದ್ರಾವತಿ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀ ಆನಂದ್ ಅವರ ಪರವಾಗಿ ನಗರದ ಬಂಟರ ಭವನದಲ್ಲಿ ಆಯೋಜಿಸಿದ್ದ ವಿಶೇಷ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಗೆಲುವಿಗೆ ಕೈಜೋಡಿಸುವಂತೆ ನೆರೆದಿದ್ದ ಕಾರ್ಯಕರ್ತರಿಗೆ ಕರೆಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಶಿವಮೊಗ್ಗ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸುರೇಶ್ ಅವರು, ಬಿಜೆಪಿ ಹೊಳೆಹೊನ್ನೂರು ಮಂಡಲ ಅಧ್ಯಕ್ಷರಾದ ಶ್ರೀ ಮಲ್ಲೇಶಪ್ಪ ಅವರು, ವಿಧಾನಪರಿಷತ್ ಶಾಸಕರಾದ ಶ್ರೀ ಧನಂಜಯ ಸರ್ಜಿ ಅವರು, ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯ್ಕ ಅವರು ಸೇರಿದಂತೆ ಪಕ್ಷದ ಅನೇಕ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ