ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶ್ರೀಮತಿ ಚಂದ್ರಕಲಾ ಹೆಚ್, ಪೊಲೀಸ್ ನಿರೀಕ್ಷಕರು, ವಿನೋಬನಗರ ಪೊಲೀಸ್ ಠಾಣೆ ರವರು ಶಿವಮೊಗ್ಗ - ಬಿ ಉಪ ವಿಭಾಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ – ಎ ಬ್ಲಾಕ್ ನಲ್ಲಿ ಗಣೇಶ ಪ್ರತಿಷ್ಟಾಪನಾ ಸಮಿತಿಯ ಸದಸ್ಯರ ಸಭೆಯನ್ನು ನಡೆಸಿ ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು.

1) ಗಣಪತಿ ಮೂರ್ತಿ ಪ್ರತಿಷ್ಟಾಪನೆ ಮಂಡಳಿಯವರು ಗಣಪತಿ ಮೂರ್ತಿಗಳನ್ನು ಕೂರಿಸುವ ಮುನ್ನ ಗಣಪತಿ ಪ್ರತಿಷ್ಠಾಪನಾ ಮಂಡಳಿಯ ಹೆಸರು, ಸದಸ್ಯರ ವಿವರ, ಪ್ರತಿಷ್ಟಾಪಿಸುವ ದಿನಾಂಕ, ಗಣಪತಿ ಮೂರ್ತಿ ಕೂರಿಸುವ ಸ್ಥಳ, ಎಷ್ಟು ದಿನಳವರೆಗೆ ಕೂರಿಸಲಾಗುತ್ತದೆ, ಮೆರವಣಿಗೆ ಮಾರ್ಗ, ವಿಸರ್ಜನೆ ಮಾಡುವ ದಿನಾಂಕ ಹಾಗೂ ಸ್ಥಳದ ಮಾಹಿತಿಯನ್ನು ಮುಂಚಿತವಾಗಿಯೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ನೀಡುವುದು.

2) ಗಣಪತಿ ಮೂರ್ತಿ ಗಳನ್ನು ಕೂರಿಸಿದ ದಿನದಿಂದ ವಿಸರ್ಜನೆ ಮಾಡುವ ದಿನದ ವರೆಗೆ ಗಣಪತಿ ಪೆಂಡಾಲ್ ಗಳಲ್ಲಿ ಸ್ವಯಂ ಸೇವಕರನ್ನು ನೇಮಿಸಿ, ದಿನದ 24 ಗಂಟೆಯೂ ಕನಿಷ್ಠಪಕ್ಷ ಇಬ್ಬರಾದರೂ ಇರುವ ಹಾಗೇ ನೋಡಿಕೊಳ್ಳಬೇಕು ಮತ್ತು ಸ್ವಯಂ ಸೇವಕರ ಹೆಸರು, ಮೊಬೈಲ್ ನಂಬರ್ ಗಳ ಮಾಹಿತಿಯನ್ನು ಪೊಲೀಸ್ ಠಾಣೆಗೆ ನೀಡುವುದು.

3) ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಅಳವಡಿಸಲಾಗುವ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಬೇರೆಯವರಿಗೆ ತೊಂದರೆಯಾಗದ ರೀತಿಯಲ್ಲಿ ಮತ್ತು ಇತರರ ಭಾವನೆಗಳಿಗೆ ದಕ್ಕೆಯಾಗದ ರೀತಿಯಲ್ಲಿ ಅಳವಡಿಸುವುದು.

4) ಗೌರಿ ಗಣೇಶ ಹಬ್ಬದ ವೇಳೆ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಿದ ಸಮಯದಲ್ಲಿ ಘನ ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ದ್ವನಿ ವರ್ಧಕಗಳನ್ನು ಬಳಕೆ ಮಾಡುವುದು ಎಂದರು.

ಈ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ಪ್ರಷ್ಟಾಪನಾ ಸಮಿತಿಯ ಸದಸ್ಯರು ವಿನೋಬನಗರ ಪೊಲೀಸ್ ಠಾಣಾ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ