ಕಾಂಗ್ರೆಸ್ ಸೇರಿದ ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸೋಣ ಮತ್ತು ಅಧಿಕಾರಕ್ಕೆ ತರೋಣ ಎಂದು ಹೇಳಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜೆಡಿಎಸ್ ನಲ್ಲಿದ್ದ ನಾವು ಕಾಂಗ್ರೆಸ್ ಪಕ್ಷವನ್ನು ಸೇರುವುದಕ್ಕೆ ಬಹುಮುಖ್ಯವಾದ ಕಾರಣ ಅದು ಬಡವರ ಪಕ್ಷ ಎಂದು. ಬಡವರ ಉದ್ಧಾರ ಆಗುವುದೇ ಆದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರೊಂದಿಗೆ ಸೇರಿಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸಿ ಜಿಲ್ಲೆಯಲ್ಲಿ ಕಳೆದುಕೊಂಡಿರುವ ಕಾಂಗ್ರೆಸ್ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸುತ್ತೇವೆ. ಕೇವಲ ಅಧಿಕಾರಕ್ಕಾಗಿ ಮಾತ್ರವಲ್ಲ ಜನರ ಕಷ್ಟಗಳಿಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಅಧಿಕಾರದ ಅಹಂಕಾರದಿಂದ ಮೆರೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನರ ಮೂಲಕವೇ ಉತ್ತರ ಕೊಡುತ್ತೇವೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಎಸ್. ಸುಂದರೇಶ್ ಮಾತನಾಡಿ ಮಧು ಬಂಗಾರಪ್ಪ ಪಕ್ಷಕ್ಕೆ ಬಂದಿರುವುದು ಮತ್ತಷ್ಟು ಬಲ ಬಂದಂತಾಗಿದೆ ಮತ್ತು ಮಂಜುನಾಥ ಗೌಡರು ಕೂಡ ಪಕ್ಷಕ್ಕೆ ಬಂದಿದ್ದಾರೆ. ಈ 2 ಶಕ್ತಿಗಳನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಪ್ರಬಲವಾಗಿ ಸಂಘಟಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಾಗೋಡು ತಿಮ್ಮಪ್ಪ, ಬಿ. ಕೆ ಸಂಗಮೇಶ್, ಕೆ .ಬಿ ಪ್ರಸನ್ನಕುಮಾರ್ ಬೆಳ್ಳೂರು ಗೋಪಾಲಕೃಷ್ಣ, ಆರ್. ಎಂ ಮಂಜುನಾಥ ಗೌಡ ಎಸ್, ಪಿ ದಿನೇಶ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153