ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.


ದಿ:01/09/2024 ರಂದು ಶಿಕಾರಿಪುರ ತಾಲೂಕು ಕ್ರೀಡಾಂಗಣ, ದಿ:03/09/2024 ರಂದು ಹೊಸನಗರ ತಾಲೂಕು ಕ್ರೀಡಾಂಗಣ, ದಿ:10/09/2024 ರಂದು ಶಿವಮೊಗ್ಗ ನೆಹರು ಕ್ರೀಡಾಂಗಣ, ದಿ:12/09/2024 ರಂದು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ, ದಿ:14/09/2024 ರಂದು ಸಾಗರ ನೆಹರೂ ಮೈದಾನ, ದಿ:15/09/2024 ರಂದು ಭದ್ರಾವತಿ ವಿ.ಐ.ಎಸ್.ಎಲ್. ಕ್ರೀಡಾಂಗಣ ಮತ್ತು ಸೊರಬ ತಾಲೂಕು ಅನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.


ಅಥ್ಲೇಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗಿದ್ದು, ಆಯಾ ತಾಲೂಕಿನ ಕ್ರೀಡಾಪಟುಗಳು ಆಯಾ ತಾಲೂಕಿನ ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಗುಂಪು ಸ್ಪರ್ಧೆಗಳನ್ನೇರ್ಪಡಿಸಲು ಕನಿಷ್ಠ 4 ತಂಡಗಳು ಇರಬೇಕು, ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯುಕ್ತಿಕ ಹಾಗೂ ಒಂದು ಗುಂಪು ಸ್ಫರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ/ಆಯ್ಕೆ ತಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಬೆಳಗ್ಗೆ 11.00 ಗಂಟೆಯೊಳಗೆ ನೊಂದಾವಣೆ ಮಾಡಿಕೊಂಡವರಿಗೆ ಮಾತ್ರ ಆಟವಾಡುವ ಅವಕಾಶ ಮತ್ತು ಮಧ್ಯಾಹ್ನದ ಲಘು ಉಪಹಾರವಿದ್ದು,, ಸಮಯಕ್ಕೆ ಸರಿಯಾಗಿ ಹಾಜರಿರದ ತಂಡಗಳನ್ನು ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು.


ಆಸಕ್ತ ಕ್ರೀಡಾಪಟುಗಳು ಆಯಾ ದಿನಾಂಕಗಳAದು ಆಯಾ ತಾಲೂಕಿನ ಕ್ರೀಡಾಂಗಣದಲ್ಲಿ ಬೆಳಗ್ಗೆ 10.00 ರೊಳಗಾಗಿ ಹಾಜರಿದ್ದು, ಸಂಬಂಧಪಟ್ಟವರಲ್ಲಿ ವರದಿ ಮಾಡಿಕೊಂಡು ಹೆಸರು ನೊಂದಾಯಿಸಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವುದು.

ವರದಿ ಪ್ರಜಾ ಶಕ್ತಿ