ಆ.22 ರಿಂದ 30 ರವರೆಗೆ ಶಿವಮೊಗ್ಗ ನಗರದಲ್ಲಿ 2024 ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ನೇಮಕಾತಿ ಮುಖ್ಯಾಲಯ, ಬೆಂಗಳೂರು ವಲಯದ ಸಹಯೊಗದೊಂದಿಗೆ ಅಗ್ನಿವೀರ್ ಸೇನಾ ರ‍್ಯಾಲಿ ನಡೆಯುತ್ತಿದ್ದು, ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಸುಮಾರು 6000 ಅಭ್ಯರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಆ.22 ರಂದು ಬೆಂಗಳೂರು ಸೇನಾ ನೇಮಕಾತಿ ವಲಯದ ಸೇನಾಧಿಕಾರಿಗಳಾದ ಬ್ರಿಗೇಡಿಯರ್ ಎಸ್.ಕೆ.ಸಿಂಗ್ ಅವರು ಸೇನಾ ಭರ್ತಿ ರ‍್ಯಾಲಿಯ ಮೊದಲನೇ ದಿನದ ಪ್ರಕ್ತಿಯೆಯನ್ನು ಉದ್ಘಾಟಿಸಿದರು. ಅಭ್ಯರ್ಥಿಗಳು 1.6 ಕಿ.ಮೀ ಓಟದಲ್ಲಿ ಉತ್ಸುಕತೆಯಿಂದ ಪಾಲ್ಗೊಂಡರು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ