ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನಗರದ ಪ್ರತಿಷ್ಠಿತ ಸಹಕಾರ ಸಂಸ್ಥೆಗಳಲ್ಲಿ ಪ್ರಮುಖವಾದ ದುರ್ಗಿಗುಡಿ ಕೋ-ಆಪರೇಟಿವ್ ಸೊಸೈಟಿಯ “75ನೇ ವರ್ಷದ ವಜ್ರ ಮಹೋತ್ಸವ” ಸಮಾರಂಭವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ದೇಶದಿಂದ ಮಾತನಾಡಿದ ಅವರು ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ 75 ವರ್ಷಗಳಿಂದ ಸದಸ್ಯರಿಗೆ ಮತ್ತು ಶಿವಮೊಗ್ಗದ ಜನತೆಗೆ ಉತ್ತಮ ಸೇವೆ ನೀಡುತ್ತಾ ಬಂದಿದ್ದಾರೆ.ಮುಂದಿನ ದಿನಗಳಲ್ಲಿ ಮುಂದುವರಿಸುತ್ತಾ ಇನ್ನು ಹೆಚ್ಚು ಉತ್ತಮ ಸಮಾಜಮುಖಿ ಕಾರ್ಯಗಳನ್ನು ಮಾಡಲಿ ಎಂದು ಆಶಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷರಾದ ಶ್ರೀ ನರಸಿಂಹ ಗಂಧದಮನೆ ಅವರು, ಶಾಸಕರುಗಳಾದ ಶ್ರೀ ಚನ್ನಬಸಪ್ಪ ಅವರು, ಶ್ರೀ ಧನಂಜಯ ಸರ್ಜಿ ಅವರು, ಪ್ರಮುಖರಾದ ಶ್ರೀ ರಾಜು ಅವರು, ಶ್ರೀ ಮರಿಯಪ್ಪ ಅವರು, ಎಂ ಕೆ ಸುರೇಶ್ ಕುಮಾರ್ ಶೆಟ್ಟಿ ಅವರು , ಶ್ರೀ ಶೇಷಾದ್ರಿ ಅವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ