ಭಾರತೀಯ ಜನತಾ ಪಕ್ಷ ಕರ್ನಾಟಕ ಘಟಕದ ವತಿಯಿಂದ ಮುಂಬರುವ 01 ಸಪ್ಟೆಂಬರ್ 2024 ರಿಂದ ರಾಜ್ಯದಾದ್ಯಂತ ಬೃಹತ್ ಮಟ್ಟದಲ್ಲಿ ಆಯೋಜಿಸುತ್ತಿರುವ “ಸದಸ್ಯತಾ ಅಭಿಯಾನ-2024” ಕಾರ್ಯಕ್ರಮದ ನಿಮಿತ್ತ ಬಿಜೆಪಿ ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ವಿಶೇಷ ಕಾರ್ಯಗಾರ ಸಭೆಯಲ್ಲಿ ಸಂಪುಟ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಅವರು, ಮಂಗಳೂರು ಲೋಕಸಭಾ ಸದಸ್ಯರಾದ ಶ್ರೀ ಬ್ರಿಜೇಶ್ ಚೌಟಾಲ ಅವರು, ಶಾಸಕರುಗಳಾದ ಶ್ರೀ ಚನ್ನಬಸಪ್ಪ ಅವರು, ಶ್ರೀ ಅರುಣ್ ಅವರು, ಶ್ರೀ ಧನಂಜಯ ಸರ್ಜಿ ಅವರು, ಮಾಜಿ ಶಾಸಕರಾದ ಶ್ರೀ ಹರತಾಳು ಹಾಲಪ್ಪ ಅವರು, ಶ್ರೀ ಅಶೋಕ್ ನಾಯಕ್ ಅವರು, ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಶ್ರೀ ದತ್ತಾತ್ರಿ ಅವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ