ಶ್ರೀಕ್ಷೇತ್ರ ಗೋಕರ್ಣದ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್ ಪೀಠದ ಹಾಗೂ ಹೊಸನಗರದ ರಾಮಚಂದ್ರಾಪುರ ಪೀಠದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ರವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಆಶೀರ್ವಾದ ಪಡೆದರು.

ಚಾತುರ್ಮಾಸ್ಯ ಕಾರ್ಯಕ್ರಮದ ಅಂಗವಾಗಿ ಗೋಕರ್ಣದಲ್ಲಿರುವ ಮಠಕ್ಕೆ ಭೇಟಿ ನೀಡಿ ಶ್ರೀಗಳಿಗೆ ಭಕ್ತಿಪೂರ್ವಕ ಗೌರವ ಸಮರ್ಪಿಸಿ ದಿವ್ಯಾಶೀರ್ವಾದ ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ ಧನಂಜಯ್ ಸರ್ಜಿ , ದತ್ತಾತ್ರಿ ಮತ್ತು ಮುಖಂಡರು ಕಾರ್ಯಕರ್ತರು ಉಪಸ್ಥರಿದ್ದರು.

ವರದಿ ಪ್ರಜಾ ಶಕ್ತಿ