ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರಶನದಲ್ಲಿ ಮತ್ತು ಶ್ರೀ ಬಾಬು ಆಂಜನಪ್ಪ, ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ - ಎ ಉಪ ವಿಭಾಗ, ಶ್ರೀ ಗಿರೀಶ್ ಪೊಲೀಸ್ ಉಪಾಧೀಕ್ಷಕರು, ಕಾರವಾರ ಟೌನ್ ಮತ್ತು ಶ್ರೀ ರಿಜೇಶ್, ಅಸ್ಸಿಸ್ಟೆಂಟ್ ಕಮಾಂಡೆಂಟ್ ಆರ್.ಎ.ಎಫ್ ರವರ ನೇತೃತ್ವದಲ್ಲಿ, ಶಿವಮೊಗ್ಗ ನಗರದಲ್ಲಿ ಪೊಲೀಸ್ ಪಥ ಸಂಚಲನ (ರೂಟ್ ಮಾರ್ಚ್) ನಡೆಸಲಾಯಿತು.ಪಥ ಸಂಚಲನವನ್ನು ಮಂಡಲೇಶ್ವರ ದೇವಸ್ಥಾನದ ಆವರಣದಿಂದ ಪ್ರಾರಂಭಿಸಿ ಎ ಎ ವೃತ್ತ, ನ್ಯೂ ಮಂಡ್ಲಿ ವೃತ್ತ, ಸಂದೇಶ್ ಮೋಟರ್ಸ್, ಕೆಜಿಎನ್ ವೃತ್ತ, ಇಮಾಮ್ ಬಡಾ, ಸೀಗೆಹಟ್ಟಿಯಿಂದ ಎ. ಎ. ವೃತ್ತಕ್ಕೆ ಬಂದು ಮುಕ್ತಾಯ ಮಾಡಲಾಯಿತು.

ಪೋಲಿಸ್ ಪಥ ಸಂಚಲನದಲ್ಲಿ ಶ್ರೀ ರವಿ ಪಟೇಲ್, ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ, ಮತ್ತು ಪೊಲೀಸ್ ನಿರೀಕ್ಷಕರಾದ ಶ್ರೀ ನಾಗರಾಜ್, ಶ್ರೀ ಮಂಜುನಾಥ್, ಶ್ರೀ ಬಲಕೃಷ್ಣ, ಹಾಗೂ ಶಿವಮೊಗ್ಗ ನಗರದ ಪೊಲೀಸ್ ಉಪ ನಿರೀಕ್ಷಕರು, ಸಿಬ್ಬಂಧಿಗಳ ಮತ್ತು ಆರ್. ಎ. ಎಫ್, ಕೆ.ಎಸ್.ಆರ್.ಪಿ ಮತ್ತು ಕ್ಯೂ.ಆರ್.ಟಿ ಯ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ