ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ನಯನ ಚಿರಂತನ ಎಂಬ ಕಾರ್ಯಕ್ರಮವು 15ರಂದು ನಗರದ ಕರ್ನಾಟಕ ಸಂಘದಲ್ಲಿ ನಡೆಯಲಿದೆ.ಶ್ರೀಮತಿ ಶಾಂತ ಎಸ್. ಶೆಟ್ಟಿ ಇವರ ನೇತೃತ್ವದ ಚಿರಂತನ ಸಂಸ್ಥೆಯ 27ನೇ ವರ್ಷದ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಿಸಿಕೊಳ್ಳುತ್ತಿದೆ.

ಉದ್ಘಾಟನೆ – ತಪಾಸಣೆ – ಬರವಣಿಗೆ ಶೀರ್ಷಿಕೆ ಅಡಿಯಲ್ಲಿ ಮನರಂಜನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಶಂಕರ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿದೆ.

ಸಮಸ್ತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಳ್ಳಬೇಕಾಗಿ ವಿನಂತಿಸಿದ್ದಾರೆ.

ವರದಿ ಪ್ರಜಾ ಶಕ್ತಿ