ಶಿವಮೊಗ್ಗ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಮಾತಾಡಿದ ಅವರ
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಮುದಾಯ ಭವನಗಳು ಹಾಗೂ ವಿದ್ಯಾರ್ಥಿನಿಲಯಗಳ ಕಾಮಗಾರಿಗಳ ಬಗ್ಗೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು .
ಮುಜರಾಯಿ ಇಲಾಖೆಯ ವಿವಿಧ ದೇವಾಲಯಗಳ ಅನುದಾನ ಬಿಡುಗಡೆ ಮಾಡುವ ಬಗ್ಗೆ, ಎಸ್ ಸಿಪಿ-ಟಿಎಸ್‌ಪಿ ಯೋಜನೆಯಡಿಯಲ್ಲಿ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಿ.ಸಿ.ಎಂ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀಮತಿ ಶೋಭಾ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಎ.ಡಿ ಸುರೇಶ್ ಮುಜರಾಯಿ ಇಲಾಖೆಯ ಮಧು ಮತ್ತು ಸುರೇಶ್, ಪಿಆರ್‌ಇಡಿ ಇಲಾಖೆಯ ಲಕ್ಷ್ಮಣ್ ಇಂಜಿನಿಯರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *