ರಾಜ್ಯ ಸರ್ಕಾರವು ತೀರ್ಮಾನಿಸಿದಂತೆ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ರಚನೆ ಮಾಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾರೇಹಳ್ಳಿ ಗ್ರಾಮದಿಂದ ಪ್ರಾರಂಭಿಸಿ ಭದ್ರಾವತಿ-ಶಿವಮೊಗ್ಗ ನಗರದ ಮೂಲಕ ಹಾದು ಶಿವಮೊಗ್ಗ ತಾಲೂಕಿನ ಮಡಿಕೆಚೀಲೂರು ಗ್ರಾಮದವರೆಗೆ ಸುಮಾರು 60 ಕಿ.ಮೀ. ಮಾನವ ಸರಪಳಿಯನ್ನು ರಚನೆ ಮಾಡುವ ಮೂಲಕ ಆಚರಿಸಲಾಗುತ್ತಿದೆ.

ಸಾರ್ವಜನಿಕರು ಸೆ. 15 ರಂದು ಬೆಳಗ್ಗೆ 8.30ಕ್ಕೆ ಈ ನಿಗದಿತ ಮಾರ್ಗದಲ್ಲಿ ಹಾಜರಿದ್ದು, ಮಾನವ ಸರಪಳಿ ರಚನೆಗೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಹಾಗೂ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಬೆಳಗ್ಗೆ 8.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಪಂವಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿರುತ್ತಾರೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *