ಬಿಜೆಪಿ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸದಸ್ಯತ್ವ ಅಭಿಯಾನ-2024 ರ ಕಾರ್ಯಗಾರವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.

ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚ ಅಭಿಯಾನ ಈಗ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲಾ ವಿಭಾಗಗಳಲ್ಲೂ ಸದಸ್ಯತ್ವ ಅಭಿಯಾನ ಪ್ರಾರಂಭವಾಗುತ್ತದೆ ಎಂದರು.

ಈ ಸಮಯದಲ್ಲಿ ಪ್ರಮುಖರಾದ ಶ್ರೀ ಸುಧಾಕರ್ ಅವರು, ಶ್ರೀ ರಾಜಶೇಖರ್ ಗಾಳಿಪುರ ಅವರು, ಶ್ರೀ ಮಾಲತೇಶ್ ಅವರು, ಶ್ರೀ ಭವಾನಿ ಮೊರೆ ಅವರು, ಶ್ರೀ ವಿಶ್ವನಾಥ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *