ಶಿವಮೊಗ್ಗದ ನಿರೀಕ್ಷಣಾ ಮಂದಿರದಲ್ಲಿ ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಟೋಲ್ ರದ್ಧತಿಗೆ  ಅಧಿಕಾರಿಗಳ ಸಭೆ ಕರೆದು ಈ ಕೆಳಕಂಡ ಅಂಶಗಳ ಬಗ್ಗೆ ಚರ್ಚಿಸಲಾಯಿತು.

  1. ಶಿವಮೊಗ್ಗ-ಶಿಕಾರಿಪುರ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಶ್ರೀ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನಗತ್ಯ ಟೋಲ್ ಅಳವಡಿಸಿ ಕರ ವಸೂಲಿ ಮಾಡುವ ಮೂಲಕ ನಿತ್ಯ ಸಂಚರಿಸುವ ಸಾವಿರಾರು ವಾಹನ ಸವಾರರಿಗೆ ಆಗುತ್ತಿರುವ ತೊಂದರೆಗಳ ಕುರಿತು ಚರ್ಚಿಸಲಾಯಿತು.
  2. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಗರ ಹೋಬಳಿ ವ್ಯಾಪ್ತಿಯಲ್ಲಿ ಬಿ.ಎಸ್.ಎನ್.ಎಲ್ ನೂತನ ಟವರ್ ಅಳವಡಿಕೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸಾರ್ವಜನಿಕರಿಂದ ಮನವಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
  3. ಲೋಕಸಭಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಅನೇಕ ಕಾಮಗಾರಿಗಳಿಗೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಕಾಮಗಾರಿಯ ವೇಗಕ್ಕೆ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಲಾಯಿತು.

ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಕೆ.ಆರ್.ಡಿ.ಸಿ.ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *