ಒಕ್ಕಲಿಗರ ಯುವ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಮಾಜದ ವಿರುದ್ಧ ಅವಹೇಳಿನಕಾರಿ ಹೇಳಿಕೆ ನೀಡಿರುವ ಶಾಸಕ ಮುನಿರತ್ನ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಅಗ್ರಹಿಸಿದರು.

ಒಕ್ಕಲಿಕ ಹಾಗೂ ದಲಿತ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು. ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುನಿರತ್ನ ಅತ್ಯಾಚಾರಿ ಹಾಗೆ ಹನಿಟ್ರಾಪ್‌ನ ರೂವಾರಿಯಾಗಿದ್ದಾರೆ ಎಂದು ದೂರಿದ್ದಾರೆ. ಗುತ್ತಿಗೆದಾರರ ಜೊತೆಗಿನ ಸಂಭಾಷಣೆ ಹೆಣ್ಣು ಮಕ್ಕಳ ವಿಷಯವಾಗಿ ಒಕ್ಕಲಿಗ ಹಾಗೂ ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಒಕ್ಕಲಿಗರ ಸಮುದಾಯದ ನಾಡಿಗೆ ನೀಡಿರುವ ಕೊಡುಗೆ ಅಪಾರ ಒಕ್ಕಲುತನ ಪಶುಪಾಲನೆ ಕೃಷಿ ಹೈನುಗಾರಿಕೆ ಮಾಡಿ ಒಕ್ಕಲಿಗರು ನಾಡಿನ ಕಟ್ಟಿದ್ದಾರೆ ರಾಜಕೀಯವಾಗಿ ಶೈಕ್ಷಣಿಕವಾಗಿ ಸಾಮಾಜಿಕ ಅಲ್ಲದೆ ನಾಡಿನ ಸಾಂಸ್ಕೃತಿಯಾಗಿ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *