ಎಸ್ ಸಿ ಐ ಶಿವಮೊಗ್ಗ, ಭಾವನಾ ಸಂಸ್ಥೆ ವತಿಯಿಂದ ನಗರದ ಮಧುರ ಪ್ಯಾರಡೈಸ್ ನಲ್ಲಿ ಅಧ್ಯಕ್ಷರಾದ ಶಶಿಕಲಾ ಶೆಟ್ಟಿ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಮನುಷ್ಯನ ಜೀವನದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಶಾಲೆಯಲ್ಲಿ ಬಾಲ್ಯದಲ್ಲಿ ದಿನದಲ್ಲಿ ಮಕ್ಕಳು ಚೆನ್ನಾಗಿ ಓದಬೇಕು. ಮುಂದಿನ ದಿನಗಳಲ್ಲಿ ಅದು ನಿಮಗೆ ಜೀವನದಲ್ಲಿ ಒಳ್ಳೆಯ ಕೆಲಸ ಸಿಗುವುದಕ್ಕೆ ಕಾರಣವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಮತ್ತು ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 18 ಜನ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಸಿ ಐ ಶಿವಮೊಗ್ಗ ಬಾವನ ಸಂಸ್ಥೆಯ ಮುಖಂಡರು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *