ಸೇವಾ ಪಾಕ್ಷಿಕ ಅಂಗವಾಗಿ ಬಿಜೆಪಿ ಶಿವಮೊಗ್ಗ ನಗರ ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ದೇಶಿ ಮಾತನಾಡಿದ ಅವರು ಮನುಷ್ಯನಿಗೆ ಆರೋಗ್ಯ ಅನ್ನೋದು ಅತ್ಯಮೂಲ್ಯ.ಸಮಯಕ್ಕೆ ಸರಿಯಾಗಿ ಉತ್ತಮವಾದ ಆಹಾರ ಸೇವಿಸಬೇಕು.ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ ಅವರು, ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ಪ್ರಮುಖರಾದ ಶ್ರೀ ದತ್ತಾತ್ರೇಯ ಅವರು, ಶ್ರೀ ಸಿದ್ಧರಾಮಣ್ಣ ಅವರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *