ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಸ್ವಚ್ಚ ಭಾರತ್ ಮಿಷನ್, ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್ ಸ್ವಚ್ಚತಾ ಸಂಸ್ಕಾರ್ ಸ್ವಚ್ಚತೆ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.ಈ ವೇಳೆ ಎಲ್ಲಾ ನ್ಯಾಯಾಧೀಶರು, ವಕೀಲರು ನ್ಯಾಯಾಲಯದ ಆವರಣವನ್ನು ಸಂಪೂರ್ಣ ಸ್ವಚ್ಚಗೊಳಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್,ಜಿಲ್ಲಾ ನ್ಯಾಯಾಲದ ಎಲ್ಲಾ ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಸದಸ್ಯರು,ವಕೀಲರು, ನ್ಯಾಯಾಲದ ಸಿಬ್ಬಂದಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *