ಶ್ರೀ ಹಾಲೇಶಪ್ಪ ಹೆಚ್. ಸಿ. ಭದ್ರಾವತಿ ಸಂಚಾರ ಪೊಲೀಸ್ ಠಾಣೆ ರವರು ರಕ್ತದಾನ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿ ಉಳಿಸುವ ನಿಟ್ಟಿನಲ್ಲಿ ಈವರೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಪಂಡಿತ್ ಪುಟ್ಟರಾಜು ಗವಾಯಿ ಸಂಗೀತ ಅಕಾಡೆಮಿ(ರಿ) ವತಿಯಿಂದ ನೀಡಲಾಗುವ ಪಂಡಿತ್ ಪುಟ್ಟರಾಜು ಗವಾಯಿ ಸಮ್ಮಾನ್ 2024 ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.22ರಂದು ಬೆಂಗಳೂರಿನ ಪ್ರತಿಷ್ಠಿತ ರವೀಂದ್ರ ಕಲಾಕ್ಷೇತ್ರ ದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿರುತ್ತದೆ.

ಪ್ರಶಸ್ತಿಗೆ ಭಾಜನರಾದ ಶ್ರೀ ಹಾಲೇಶಪ್ಪ ರವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 30ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಮಿಥುನ್ ಕುಮಾರ್ ಜಿ ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಸನ್ಮಾನಿಸಿ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಶ್ರೀ ಗಜಾನನ ವಾಮನ ಸುತರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ಮತ್ತು ಶ್ರೀ ನಾಗರಾಜ್ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ ರವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *