ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ 25ನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್, ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ ,, ಮೆಗನ್ ಆಸ್ಪತ್ರೆ ಹಾಗೂ ಹಲವು ಖಾಸಗಿ ಆಸ್ಪತ್ರೆಗಳ ಮುಂಭಾಗ ಆಹಾರದ ಅವಶ್ಯಕತೆ ಇರುವವರಿಗೆ ವಿತರಿಸಲಾಯಿತು

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಎಚ್.ಪಿ.ಗಿರೀಶ್, ಗ್ರಾಮಾಂತರ ಅಧ್ಯಕ್ಷ ಈ.ಟಿ. ನಿತಿನ್, ದಕ್ಷಿಣ ಬ್ಲಾಕ್ ಪದಾಧಿಕಾರಿಗಳಾದ , ಎಂ ರಾಹುಲ್ ಗಗನ್ ಗೌಡ ,ರಾಹುಲ್ , ಸಂದೀಪ್ ಮೊದಲಿಯಾರ್, ನವೀನ್ ಇತರರು ಇದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ