ಭದ್ರಾವತಿ ನಗರದಲ್ಲಿ ವಿಶೇಷ ಕಾರ್ಯಾಚರಣೆ ನೆಡೆಸಿ ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ (Half Helmet), 20 ದೋಷಪೂರಿತ ಸೈಲೆನ್ಸರ್ (Defective Silencer) 50 ಪ್ರಕರ ಬೆಳಕಿನ LED ಲೈಟ್ ಗಳನ್ನು ಈ ದಿನ 29ರಂದು ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಸಮ್ಮುಖದಲ್ಲಿ ಭದ್ರಾವತಿ ನಗರದ ರಂಗಪ್ಪ ವೃತ್ತದಲ್ಲಿ ಬುಲ್ಡೋಜರ್ ಅನ್ನು ಬಳಸಿ ನಾಶ ಪಡಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ., ಶ್ರೀ ನಾಗರಾಜ್, ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ, ಶ್ರೀ ಜಗದೀಶ್ ಹಂಚಿನಾಳ್, ಪೊಲೀಸ್ ನಿರೀಕ್ಷಕರು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀಮತಿ ನಾಗಮ್ಮ ಪೊಲೀಸ್ ನಿರೀಕ್ಷಕರು, ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆ, ಮತ್ತು ಭದ್ರಾವತಿ ನಗರದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.