ಮಕ್ಕಳ ಮತ್ತು ಅವರ ಹಕ್ಕುಗಳ ರಕ್ಷಣೆ ಮಾಡಬೇಕಾದರೆ ಮುಖ್ಯವಾಗಿ ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆ 2016 ಮತ್ತು ಮಕ್ಕಳ ರಕ್ಷಣೆ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಎಂ ಕೊಳ್ಳ ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದೊಂದಿಗೆ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ – ಆರ್ ಟಿ ಇ ಕಾಯ್ದೆ 2009 ಅನುಷ್ಟಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿಯವರೊAದಿಗೆ ಬಾಲ ನ್ಯಾಯ ಮಂಡಳಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.


ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಮಕ್ಕಳು ಹೆಚ್ಚಿನ ಸಮಯ ಶಿಕ್ಷಣ ಸಂಸ್ಥೆಗಳಲ್ಲಿ ಕಳೆಯುತ್ತಾರೆ. ಆದ್ದರಿಂದ ಶಿಕ್ಷಣ ಸಂಸ್ಥೆ, ಇಲಾಖೆಯ ಜವಾಬ್ದಾರಿ ಹೆಚ್ಚಿರುತ್ತದೆ. ಆರ್‌ಟಿಇ ಕಾಯ್ದೆ 2009 ರಿಂದ ಜಾರಿಗೆ ಬಂದಿದೆ. ಇಲ್ಲಿಯವರೆಗೆ ಎಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗಿದೆ ಎಂಬುದನ್ನು ನಾವು
ಶಿವಮೊಗ್ಗ ಮುಂದುವರಿದ ಜಿಲ್ಲೆಯಾಗಿದೆ. ಆದರೆ ರಾಜ್ಯದಲ್ಲೇ ಹೆಚ್ಚು ಬಾಲ್ಯ ವಿವಾಹ ಪ್ರಕರಣ ವರಿದಯಾಗುತ್ತಿರುವುದು ಆತಂಕಕಾರಿಯಾಗಿದೆ. ಹಾಗೂ ಪೋಕ್ಸೋ ಮತ್ತು ಬಾಲ್ಯ ವಿವಾಹದ ಶೇ.90 ಮಕ್ಕಳು ಸರ್ಕಾರಿ ಶಾಲೆಗಳ ಮಕ್ಕಳಾಗಿರುವುದು ಕೂಡ ಕಳಕಳಕಾರಿ.

Leave a Reply

Your email address will not be published. Required fields are marked *