ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕ/ ಬೋಧಕೇತರ ಸಿಬ್ಬಂದಿಗಳಿಗೆ ಇನ್ನೂ ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಆದ್ಯತೆ ಮೇರೆಗೆ ಕೋವಿಡ್ -19 ಲಸಿಕಾಕರಣ ನಡೆಸುವುದು. ರಾಜ್ಯದ ಎಲ್ಲ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 9 ನೇ ತರಗತಿ ಹಾಗೂ 10 ನೇ ತರಗತಿಯ ವಿದ್ಯಾರ್ಥಿಗಳ ಕೋವಿಡ್ -19 ಲಸಿಕೆ ಪಡೆಯದ ತಂದೆ ,ತಾಯಿ/ ಪೋಷಕರುಗಳಿಗೆ ಕೋವಿಡ್-19 ಲಸಿಕಾಕರಣ ವನ್ನು ಆದ್ಯತೆ ಮೇರೆಗೆ ನಡೆಸಲು ಈ ಮೂಲಕ ಕೋರಲಾಗಿದೆ. ಇದಕ್ಕಾಗಿ ಶಾಲೆಯ ಮುಖ್ಯಸ್ಥರಿಂದ ತಂದೆ,ತಾಯಿ/ ಪೋಷಕರಿಗೆ ಮಾಹಿತಿ ತಲುಪಿಸಿ ಸದ್ಯಕ್ಕೆ ಪಡೆದವರ ಪಟ್ಟಿ ತಯಾರಿಸಿ ಆರೋಗ್ಯ ಇಲಾಖೆಗೆ ಮಾಹಿತಿ ಒದಗಿಸಿಕೊಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ನಿರ್ದೇಶನ ನೀಡಲು ಕೋರಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153