ಶ್ರೀ ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಶಿಕಾರಿಪುರ ತಾಲೂಕು ಕಾಂಗ್ರೆಸ್ ವತಿಯಿಂದ ಅನ್ನಭಾಗ್ಯದ ರುವಾರಿ ಸನ್ಮಾನ್ಯ ಸಿದ್ದರಾಮಯ್ಯನವರ ಜನ್ಮದಿನೋತ್ಸವದ ಅಂಗವಾಗಿ* ಶಿಕಾರಿಪುರ ನಗರದ ಆರಾಧ್ಯ ದೈವ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ರಕ್ತದಾನ ಶಿಬಿರದ ನೇತೃತ್ವವನ್ನು ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿಗಳು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅದ್ಯಕ್ಷರಾದ ಗೋಣಿ ಮಾಲತೇಶ್ ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರರಾದ ಶಾಂತವಿರಪ್ಪಗೌಡರು ಮಾಜಿ ಕಾಡಾ ಅದ್ಯಕ್ಷರಾದ ನಗರದ ಮಹದೇವಪ್ಪನವರು ಈ ರಕ್ತದಾನದ ಉಸ್ತುವಾರಿ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಭಂಡಾರಿ ಮಾಲತೇಶ್ ರವರು ತಾಲೂಕು ಸಾಮಾಜಿಕ ಜಾಲತಾಣದ ಅದ್ಯಕ್ಷನಾದ ಗಜೇಂದ್ರ ಹಾಗೂ ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ಅದ್ಯಕ್ಷರಾದ ಮಲ್ಲಿಕನಾಯ್ಕರವರು ಮೊದಲನೆಯದಾಗಿ ರಕ್ತದಾನ ಮಾಡಿದೆವು. ಈ ರಕ್ತದಾನ ಶಿಬಿರದಲ್ಲಿ ಪುರಸಭಾ ಸದಸ್ಯರಾದ ನಾಗರಾಜಗೌಡ್ರು ತಾಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕರವರು ತಾಲೂಕು ಕಾಂಗ್ರೆಸ್ ಪದಾಧಿಕಾರಿಗಳಾದ ಮಂಜಣ್ಣನವರು ಗುಡ್ಡಳ್ಳಿ ಸಂತೋಷ್ ರವರು ಹಾಗೂ ಮುಂತಾದ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಾಯು ಯುವ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅಭಿಮಾನಿಗಳು ಭಾಗವಹಿಸಿ ರಕ್ತದಾನ ಮಾಡಿದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ