ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಮತ್ತು ನಗರದಲ್ಲಿ ಸಡಗರದ ರಂಜಾನ್ ಹಬ್ಬವನ್ನು ಆಚರಿಸಿದರು.ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲೀಂ ಸಮುದಾಯದಿಂದ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈದ್ಗಾ, ಹಾಗೂ ಇತರೆ ಪ್ರಾರ್ತನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಆಚರಣೆ ನಡೆದಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.ನಂತರ ಪರಸ್ಪರ ತಬ್ಬಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನ ಕೋರಿದರು. ಬೆಳಿಗ್ಗೆ 9 ಗಂಟೆಗೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಆರಂಭವಾಗಿದೆ. ಸುಮಾರು 30 ನಿಮಿಷ ಪ್ರಾರ್ಥನೆ ಸಲ್ಲಿಸಿದರು. ರಂಜಾನ್ ಹಬ್ಬಕ್ಕೆ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಪಕ್ಷದ ಎಲ್ಲಾ ರಾಜಕೀಯ ಮುಖಂಡರುಗಳು ಶುಭಾಶಯ ಕೋರಿದರು.