ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಅರೆ ಸರ್ಕಾರಿ ಪತ್ರದಲ್ಲಿ 2021 ರ ಆಗಸ್ಟ್ ರಿಂದ ಅಕ್ಟೋಬರ್ ಮಾಹೆಯಲ್ಲಿ ಆಚರಿಸಲಾಗುವ ಹಬ್ಬಗಳಾದ ಮೊಹರಂ ಶ್ರೀಕೃಷ್ಣ ಜನ್ಮಾಷ್ಟಮಿ ಗಣೇಶ ಚತುರ್ಥಿ ದುರ್ಗಾ ಪೂಜೆ ಮೊದಲಾದ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ಮತ್ತು ಒಗ್ಗೂಡುವಿಕೆ ಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ, ಸಲಹೆ ನೀಡಲಾಗಿದೆ.ಕೋವಿಡ್ 19 ಸಾಂಕ್ರಮಿಕ ಸಂಕಲನ ನಿಯಂತ್ರಿಸಲು ರಾಜ್ಯ ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ 19 ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೋಂಕಿನ ಸರಪಳಿಯನ್ನು ಮುರಿಯಲು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳ ಬೇಕಾದ ಅನಿವಾರ್ಯ ತೆ ಇರುತ್ತದೆ. ಆದೇಶದಲ್ಲಿ ಪೂಜಾ ಸ್ಥಳಗಳು ದೇವಸ್ಥಾನಗಳು ಮಸೀದಿಗಳು ಚರ್ಚ್ ಗಳು ಗುರುದ್ವಾರಗಳು ಮತ್ತು ಇತರೆ ಧಾರ್ಮಿಕ ಸ್ಥಳಗಳು ತೆರೆಯಲು ಮತ್ತು ಕೋವಿಡ್ 19 ಅನುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಪೂಜಾ ಕಾರ್ಯಗಳನ್ನು ಕೈಗೊಳ್ಳಲು ಅನುಮತಿಸಿದೆ. ಆದರೆ ಜಾತ್ರೆಗಳು ದೇವಾಲಯದ ಹಬ್ಬಗಳು ಮೆರವಣಿಗೆ ಮತ್ತು ಸಭೆ ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ. ಮುಂದುವರೆದು ಹಬ್ಬದ ದಿನಗಳು ಮತ್ತು ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅಗತ್ಯವಿದ್ದಲ್ಲಿ ಮುಖ್ಯ ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಆದೇಶಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣ ಅಧಿನಿಯಮ 2005 ರ ಸೆಕ್ಷನ್ 24 ಎಲ್ ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರ ನಿರ್ದೇಶನದಂತೆ ಈ ಕೆಳಗೆ ಸಹಿ ಮಾಡಿರುವ ಮುಂಬರಲಿರುವ ಮೊಹರಂ ಮತ್ತು ಗಣೇಶ ಉತ್ಸವವನ್ನು ಆಚರಿಸುವ ಸಂಬಂಧವಾಗಿ ಈ ಆದೇಶದ ಮೇಲೆ ತಂಡದಲ್ಲಿರುವಂತೆ ಮಾರ್ಗಸೂಚಿಗಳನ್ನು ಹೊರಡಿಸಿ ಇರುತ್ತೇನೆ. * ಸಾರ್ವಜನಿಕ ಸ್ಥಳಗಳಲ್ಲಿ ಪಂಜಾವನ್ನು ಸ್ಥಾಪಿಸುವುದನ್ನು ತಾಜಿಯಾವನ್ನು ನಿರ್ಬಂಧಿಸಲಾಗಿದೆ ಮುಂದುವರೆದು ದಿನಾಂಕ :12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮೆರವಣಿಗೆ ನಿಷೇಧಿಸಲಾಗಿದೆ. ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವುದು. * ಪಂಜ ಮತ್ತು ತಾಜಾಯತ್ ಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡತಕ್ಕದ್ದು. * ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ.ಮೋಹನ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ. * ಪ್ರಾರ್ಥನಾ ಸ್ಥಳಗಳಲ್ಲಿ ಮುಖ ಗವಸು ಅನ್ನು ಕಡ್ಡಾಯವಾಗಿ ಕಳುಹಿಸತಕ್ಕದ್ದು.* 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದ್ದು. * ಕೋವಿಡ್- 19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6ಅಡಿ ಅಂತರ ಕಾಯ್ದುಕೊಳ್ಳಲು ತಕ್ಕಂಡು ಆಗಾಗ ಕೈಗಳನ್ನು ಸೋಪು ಮತ್ತು ಸ್ಯಾನಿಟೈಸರ್ ಗಳಿಂದ ಶುಚಿಗೊಳಿಸತಕ್ಕದ್ದು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು.* ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಗುಂಪುಗೂಡುವುದನ್ನುಆಡಳಿತಾಧಿಕಾರಿ ಇವರು ಭಕ್ತಾದಿಗಳು ಕುಳಿತುಕೊಳ್ಳುವ ಗರಿಷ್ಠ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸಿದವುದು.* ಮಸೀದಿಗಳಲ್ಲಿ ಪ್ರಾರ್ಥನೆ ಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಜಾಯನಮಾಜ್ ಕಡ್ಡಾಯವಾಗಿ ತರತಕ್ಕದ್ದು.* ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಿಗೆ ಅಂದರೆ ಸಭಾಂಗಣ ಸಮುದಾಯ ಭವನ ಶಾದಿಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ. * ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.* ಭಕ್ತಾದಿಗಳು ಯಾವ ಯಾವ ಕೆಲಸವನ್ನು ಎದುರಿಸುವುದು ಯಾವ ಕೆಲಸವನ್ನು ನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿವರ್ಧಕದ ಮೂಲಕ ಸೂಚಿಸುವುದು.* ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ ಪೆಂಡಾಲ್ ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.* ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.* ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತಿ ಸಮೀಪ ವಾಗುವಂತಹ ಮಾರ್ಗಗಳನ್ನು ಒಳಗೊಂಡು ಮಹಾನಗರ ಪಾಲಿಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೋಂಡಾ ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನ ಟ್ಯಾಂಕ್ ಗಳಲ್ಲಿ ವಿಸರ್ಜಿಸತಕ್ಕದ್ದು. * ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೇಷನ್ ಮಾಡತಕ್ಕದ್ದು ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ಕಳುಹಿಸತಕ್ಕದ್ದು.* ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್ – 19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸು ಶೂಗಳನ್ನು ಧರಿಸುವುದು ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. * ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ ಜಿಲ್ಲಾಡಳಿತ ಪೊಲೀಸ್ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪದಾಧಿಕಾರಿಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ ನಿರ್ದೇಶನ ಹಾಗೂ ಸೂಚನೆ ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.ಕೋವಿಡ್- 19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153