ಉಡುಪಿ ಜಿಲ್ಲೆಯ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಜನ್ಮ ದಿನವನ್ನು ವಿಶೇಷವಾಗಿ ಆಚರಿಸಿದರು.ಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಇರುವ ಕಿಣಿ ಗೋಶಾಲೆಗೆ ಭೇಟಿ ನೀಡಿ ಗೋವುಗಳಿಗೆ ಮೇವು ನೀಡಿ ಜನ್ಮದಿನವನ್ನು ಆಚರಿಸಿದರು. ನಂತರ ಕಣಂಜೂರು ಹೊಸಬೆಳಕು ಆಶ್ರಮಕ್ಕೆ ಭೇಟಿ ನೀಡಿ ಆಶ್ರಮದ ವಿದ್ಯಾರ್ಥಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿದರು.
ಕಾಪು ಕ್ಷೇತ್ರದ ಶಾಸಕ ಆದ ನಂತರ ಇವರ ನೇತೃತ್ವದಲ್ಲಿ ರಾಜ್ಯದ ಪ್ರಸಿದ್ಧ ಹೊಸ ಶ್ರೀ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಬ್ರಹ್ಮಕಲಸೋತ್ಸವ ಮೂಲಕ ಹೊಸ ರೂಪ ತಂದಿದ್ದಾರೆ.ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.